ಹೊಸದಿಲ್ಲಿ : ಪದ್ಮಶ್ರೀ ಪುರಸ್ಕೃತ ಭಾರತೀಯ ಜಾಹೀರಾತು ಕ್ಷೇತ್ರದ ವಾಸ್ತು ಶಿಲ್ಪಿ ಎಂದು ಕರೆಯಲ್ಪಡುವ ಪಿಯೂಷ್ ಪಾಂಡೆ ಅವರು ಗುರುವಾರ ನಿಧನರಾದರು.
ಇದನ್ನೂ ಓದಿ : ಆಂಧ್ರಪ್ರದೇಶ| ಖಾಸಗಿ ಬಸ್ಗೆ ಬೆಂಕಿ; 20 ಜನರು ಸಾವು
ಅವರು ಒಗಿಲ್ವಿ ಇಂಡಿಯಾ ಕಂಪೆನಿಯ ಕಾರ್ಯನಿರ್ವಾಹಕ ಮುಖ್ಯಸ್ಥರಾಗಿ ಮತ್ತು ವರ್ಲ್ಡ್ವೈಡ್ ಚೀಪ್ ಕ್ರಿಯೇಟಿವ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಫೆವಿಕಾಲ್ ಹಾಗೂ ವೊಡಾಫೋನ್ ಜಾಹೀರಾತುಗಳಿಗೆ ಹೆಸರುವಾಸಿಯಾದ ಪಾಂಡೆ ಅವರು ಭಾರತದ ಜಾಹೀರಾತು ಕ್ಷೇತ್ರದ ಮುಂಚೂಣಿ ವ್ಯಕ್ತಿಗಳಲ್ಲಿ ಒಬ್ಬರು.
ಕ್ಯಾಡ್ಬರಿಯ “ಕುಚ್ ಖಾಸ್ ಹೈ”, ಏಷಿಯನ್ ಪೇಂಟ್ಸ್ನ “ಹರ್ ಖುಷಿ ಮೇ ರಂಗ್ ಲಾಯೆ” ಜಾಹೀರಾತಿನಿಂದ ವೊಡಾಫೋನ್ ಜಾಹೀರಾತಿನವೆರೆಗೆ ಅವರ ಜಾಹೀರಾತುಗಳು ಜನಮನದಲ್ಲಿ ಅಚ್ಚಳಿಯದಂತೆ ಉಳಿದಿವೆ.
2014ರ ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿಯವರಿಗಾಗಿ ರಚಿಸಿದ “ಅಬ್ ಕಿ ಬಾರ್, ಮೋದಿ ಸರಕಾರ್” ಎಂಬ ಘೋಷಣೆಯು ರಾಜಕೀಯ ಕ್ಷೇತ್ರದಲ್ಲೂ ಬಹಳ ಪ್ರಸಿದ್ಧಿ ಪಡೆದಿದೆ.
ಪಾಂಡೆ ಅವರ ನಿಧನಕ್ಕೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಇದನ್ನೂ ನೋಡಿ : ಚಾಂದಿನಿ ಸುಳ್ಯ ಸಾವಿಗೆ ಸರ್ಕಾರ ನೇರ ಹೊಣೆ – ಡಿವೈಎಫ್ಐ ಆರೋಪ Janashakthi Media
