ಬೆಂಗಳೂರು : ಬೇಸಿಗೆಯಲ್ಲಿ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆ ಮಾಡಲು ಗ್ಯಾರಂಟಿ ಸರ್ಕಾರ ಬದ್ಧವಾಗಿದೆ ಎಂದು ಮಾರ್ಚ್ 20ರಂದು ಪತ್ರಿಕಾ ಪ್ರಕಟಣೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹಾಲಿ ಇರುವ ಜಲಮೂಲಗಳು ಬತ್ತಿಹೋಗಿರುವುದರಿಂದ ಹಾಗೂ ಕೊಳವೆ ಬಾವಿಗಳ ಇಳುವರಿ ಕಡಿಮೆಯಾಗುತ್ತಿರುವುದರಿಂದ ರಾಜ್ಯದ ಕೆಲವೊಂದು ಜಿಲ್ಲೆಗಳ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುತ್ತದೆ. ಶುದ್ಧ
ಇದನ್ನೂ ಓದಿ: ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ‘ಬಿ-ಟೀಮ್’ – ಕೇರಳ ಸಿಎಂ ಆರೋಪ
ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ಅಭಾವ ಉಂಟಾದ ಸಂದರ್ಭಗಳಲ್ಲಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಮುಂದಿನ ಮೂರು ತಿಂಗಳುಗಳ ಕಾಲ ಪ್ರತಿ 2ನೇ ಹಾಗೂ 4ನೇ ಸೋಮವಾರದಂದು ಪಂಚಾಯತ್ ಅಭಿವೃದ್ಧಿ ಅಧಿಕಾರಗಳ ಜೊತೆಯಲ್ಲಿ ಕಡ್ಡಾಯವಾಗಿ ಕುಡಿಯುವ ನೀರಿನ ಸಮಸ್ಯೆ ಕುರಿತ ವಾಸ್ತವ ಸ್ಥಿತಿಯ ಬಗ್ಗೆ ಸಭೆ ನಡೆಸಲು ಹಾಗೂ ಪ್ರತಿ 2ನೇ ಹಾಗೂ 4ನೇ ಮಂಗಳವಾರದಂದು ಪತ್ರಿಕಾಗೋಷ್ಠಿ ಕರೆದು ಜಿಲ್ಲೆಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಕೈಗೊಂಡ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿನ ನೀರಿನ ಮೂಲಗಳನ್ನು ಶೇ.100ರಷ್ಟು ಭೌತಿಕ ಪರಿಶೀಲನೆ ನಡೆಸಿ, ಕೊಳವೆಬಾವಿಗಳ ಸುತ್ತಮುತ್ತಲೂ ಯಾವುದೇ ಕಲುಷಿತ ನೀರು ಅಥವಾ ಚರಂಡಿ ನೀರು ನಿಲ್ಲದಂತೆ ಹಾಗೂ ಕಲುಷಿತ ನೀರು ಸರಾಗವಾಗಿ ಹರಿಯಲು ಸೂಕ್ತ ಚರಂಡಿ ವ್ಯವಸ್ಥೆಯನ್ನು ಕೈಗೊಂಡು, ಕೊಳವೆಬಾವಿ ಸುತ್ತ ಕಾಂಕ್ರೀಟ್’ನಿಂದ ಕಟ್ಟೆಯನ್ನು ಕಟ್ಟಿ, ಕಲುಷಿತ ನೀರು ಕೊಳವೆಬಾವಿಗೆ ಸೇರದಂತೆ ಮುಂಜಾಗ್ರತೆ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ನೀರಿನ ಮೂಲಗಳ ಸುರಕ್ಷತೆಯನ್ನು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡಲು ಹಾಗೂ ಕುಡಿಯುವ ನೀರಿನ ಅಭಾವ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಗ್ರಾಮಸ್ಥರಿಗೆ ಅಗತ್ಯ ಜಾಗೃತಿ ಮೂಡಿಸಲು ಸಹ ಸೂಚನೆಗಳನ್ನು ನೀಡಲಾಗಿದೆ. ಬೇಸಿಗೆಯಲ್ಲಿ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆ ಮಾಡಲು ಗ್ಯಾರಂಟಿ ಸರ್ಕಾರ ಬದ್ಧವಾಗಿದೆ ಎಂದರು.
ಇದನ್ನೂ ನೋಡಿ: ಓದು ಕಾರ್ಯಾಗಾರ | ವಿದ್ಯಾರ್ಥಿಗಳ ಕಣ್ಣಲ್ಲಿ ಕುವೆಂಪು Janashakthi Media
