ರಾಜ್ಯ ಸರ್ಕಾರಿ ಬಸ್ ದರ ಏರಿಕೆ ಸಾಧ್ಯತೆ: BMTCಗೆ 44%, KSRTCಗೆ 33% ಹೆಚ್ಚಳ ಪ್ರಸ್ತಾವನೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಜುಲೈ 2ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಸರ್ಕಾರಿ ಬಸ್‌ಗಳ ಪ್ರಯಾಣ ದರವನ್ನು ಹೆಚ್ಚಿಸುವ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಬಸ್

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಟಿಕೆಟ್ ದರದಲ್ಲಿ 44% ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು (KSRTC) 33% ಹೆಚ್ಚಳವನ್ನು ಕೇಳಿವೆ. ಪ್ರತಿ ತಿಂಗಳು ಸುಮಾರು ₹40 ಕೋಟಿ ನಷ್ಟವಾಗುತ್ತಿದೆ ಎಂದು ಸಂಸ್ಥೆಗಳು ತಿಳಿಸಿವೆ. ಬಸ್

ಸಾರಿಗೆ ಸಚಿವ ಬೈರತಿ ಸುರೇಶ್ ಮಾತನಾಡಿ, ಕಳೆದ ಐದು ತಿಂಗಳಲ್ಲಿ ಡೀಸೆಲ್ ಸೇರಿದಂತೆ ಇಂಧನ ದರಗಳು ನಾಲ್ಕು ಬಾರಿ ಹೆಚ್ಚಳವಾಗಿರುವುದರಿಂದ ದರ ಹೆಚ್ಚಳ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಂದ್ರು ಲಮಾಣಿ ವಿರುದ್ಧ ಜೀವಬೆದರಿಕೆ ಆರೋಪ: ಕಾರು ಚಾಲಕ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು

ಆದರೆ, ಸಾಮಾನ್ಯ ಜನರಿಗೆ ಭಾರವಾಗದ ರೀತಿಯಲ್ಲಿ ಹಾಗೂ ನಷ್ಟದಲ್ಲಿರುವ ಸಾರಿಗೆ ಸಂಸ್ಥೆಗಳಿಗೂ ಸಹಾಯವಾಗುವಂತೆ ಸಮತೋಲನದಲ್ಲಿ ದರ ಹೆಚ್ಚಳ ಮಾಡಬೇಕು ಎಂದು ಅವರು ತಿಳಿಸಿದ್ದಾರೆ. ಈ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಮತ್ತು ಸಚಿವ ಸಂಪುಟದ ಮುಂದೆ ಮಂಡಿಸಲಾಗುವುದು ಎಂದು ಅವರು ಹೇಳಿದರು.

ಶಕ್ತಿ ಯೋಜನೆಯಡಿ ಸಾರಿಗೆ ಸಂಸ್ಥೆಗಳಿಗೆ ಬರಬೇಕಾದ ಸುಮಾರು ₹5,500 ಕೋಟಿ ಬಾಕಿ ಹಣವನ್ನು ಶೀಘ್ರ ಬಿಡುಗಡೆ ಮಾಡುವಂತೆ ಸರ್ಕಾರದ ಬಳಿ ಮನವಿ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಜೊತೆಗೆ ಸಾರಿಗೆ ನೌಕರರ ವೇತನ ಬಾಕಿ ಪಾವತಿಸುವ ವಿಷಯವೂ ಹಣಕಾಸು ಸ್ಥಿತಿಯನ್ನು ಪರಿಶೀಲಿಸಿದ ನಂತರ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.

ಮಳೆಗಾಲ ಅಧಿವೇಶನ ಸಾಧ್ಯತೆ

ಸಚಿವ ಸಂಪುಟ ಸಭೆಯಲ್ಲಿ ಜುಲೈ ಮೂರನೇ ವಾರದಲ್ಲಿ ವಿಧಾನಮಂಡಲದ ಜಂಟಿ ಮಳೆಗಾಲ ಅಧಿವೇಶನ ನಡೆಸುವ ಬಗ್ಗೆ ಕೂಡ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಇದು ಡಿ.ಕೆ. ಶಿವಕುಮಾರ್ ಅವರ ಮುಖ್ಯಮಂತ್ರಿ ಅವಧಿಯ ಮೊದಲ ಅಧಿವೇಶನವಾಗಲಿದೆ.

ಈ ಅಧಿವೇಶನದಲ್ಲಿ ಕಡಿಮೆ ಮಳೆ, ಬಿತ್ತನೆಗೆ ತೊಂದರೆ ಹಾಗೂ ಸಂಭವನೀಯ ಬರ ಪರಿಸ್ಥಿತಿ ಕುರಿತು ಚರ್ಚೆಯಾಗುವ ಸಾಧ್ಯತೆ ಇದೆ.

ಇದನ್ನೂ ನೋಡಿ: ಮತದಾರ ಪಟ್ಟಿ ಪರಿಷ್ಕರಣೆಯಲ್ಲಿ ‘ವಿಐಪಿ’! ಪಾಸ್‌ಪೋರ್ಟ್‌ ಕಥೆ ಏನು? ಎಸ್‌ಐಆರ್‌ ಸುತ್ತ ಪ್ರಶ್ನೆಗಳ ಹುತ್ತ |

Donate Janashakthi Media

Leave a Reply

Your email address will not be published. Required fields are marked *