ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ 50:50 ಸೈಟ್ ಹಂಚಿಕೆ ರದ್ದು: ಯತೀಂದ್ರ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಮಾಡಲಾಗಿದ್ದ ಎಲ್ಲ 50:50 ಪರ್ಯಾಯ ನಿವೇಶನ ಹಂಚಿಕೆಗಳನ್ನು ತಕ್ಷಣವೇ ರದ್ದುಪಡಿಸಲು ರಾಜ್ಯ ಸರ್ಕಾರ ಆದೇಶಿಸಿದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರು

2023ರ ಮಾರ್ಚ್ 14ರಂದು ಸರ್ಕಾರ ಹೊರಡಿಸಿದ್ದ ನಿರ್ದೇಶನಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ನಿವೇಶನ ಹಂಚಿಕೆಗಳ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಏಕಸದಸ್ಯ ತನಿಖಾ ಸಮಿತಿಯ ಶಿಫಾರಸು ಹಾಗೂ ಉನ್ನತ ಮಟ್ಟದ ತಾಂತ್ರಿಕ ಸಮಿತಿ ಸಲ್ಲಿಸಿರುವ ವರದಿಯ ಆಧಾರದ ಮೇಲೆ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಸಚಿವರು ತಿಳಿಸಿದ್ದಾರೆ.

ಆಗಸ್ಟ್ 19ರಂದು ಹೊರಡಿಸಿರುವ ಸರ್ಕಾರದ ಆದೇಶದಲ್ಲಿ, 2023ರ ಮಾರ್ಚ್ 14ರ ನಿರ್ದೇಶನಗಳಿಗೆ ವಿರುದ್ಧವಾಗಿ ಮಾಡಲಾಗಿರುವ ಎಲ್ಲ 50:50 ಪರ್ಯಾಯ ನಿವೇಶನ ಹಂಚಿಕೆ ಆದೇಶಗಳನ್ನು ರದ್ದುಪಡಿಸುವಂತೆ ಸೂಚಿಸಲಾಗಿದೆ.

ಇಂತಹ ಹಂಚಿಕೆಗಳಿಗೆ ಸಂಬಂಧಿಸಿದಂತೆ ಮುಡಾ ಅಧ್ಯಕ್ಷರು ಹಾಗೂ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರ ನಿರ್ದೇಶಿಸಿದೆ.

ಇದನ್ನೂ ಓದಿ : ಕರ್ನಾಟಕದ 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 428ಕ್ಕೆ ಪ್ರಾಂಶುಪಾಲರೇ ಇಲ್ಲ!

ಮಾರಾಟ ಪತ್ರ ನೋಂದಣಿಯಾಗಿದ್ದರೆ ನ್ಯಾಯಾಲಯದ ಮೊರೆ

ನಿಯಮಬಾಹಿರವಾಗಿ ಹಂಚಿಕೆ ಮಾಡಲಾಗಿರುವ ನಿವೇಶನಗಳ ಮಾರಾಟ ಪತ್ರಗಳು ಈಗಾಗಲೇ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿಯಾಗಿದ್ದರೆ, ಅವುಗಳನ್ನು ರದ್ದುಪಡಿಸುವಂತೆ ಕೋರಿ ಮುಡಾ ದಿವಾಣಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಬೇಕು ಎಂದು ಸರ್ಕಾರ ಸೂಚಿಸಿದೆ.

ಹೀಗಾಗಿ ಕೇವಲ ನಿವೇಶನ ಹಂಚಿಕೆ ಆದೇಶಗಳನ್ನು ರದ್ದುಪಡಿಸುವುದಷ್ಟೇ ಅಲ್ಲದೆ, ಈಗಾಗಲೇ ನೋಂದಣಿಯಾಗಿರುವ ಮಾರಾಟ ಪತ್ರಗಳನ್ನೂ ಕಾನೂನು ಪ್ರಕ್ರಿಯೆ ಮೂಲಕ ರದ್ದುಪಡಿಸಲು ಸರ್ಕಾರ ಮುಂದಾಗಿದೆ.

ಮುಡಾದಲ್ಲಿ ನಡೆದಿರುವ 50:50 ನಿವೇಶನ ಹಂಚಿಕೆಗಳ ಕುರಿತು ನಡೆದ ಏಕಸದಸ್ಯ ತನಿಖೆ ಹಾಗೂ ಉನ್ನತ ಮಟ್ಟದ ತಾಂತ್ರಿಕ ಸಮಿತಿಯ ವರದಿಗಳ ಆಧಾರದ ಮೇಲೆ ಸರ್ಕಾರ ಈ ಕ್ರಮ ಕೈಗೊಂಡಿದೆ.

ಈ ಮೂಲಕ ಸರ್ಕಾರದ 2023ರ ನಿರ್ದೇಶನಗಳನ್ನು ಉಲ್ಲಂಘಿಸಿ ನಡೆದಿರುವ ನಿವೇಶನ ಹಂಚಿಕೆಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ನೋಡಿ : 1 ಕೋಟಿ ಮತದಾರರ ಮೇಲೆ SIR ತೂಗುಕತ್ತಿ: Form-8 ಬದಲು Form-6 ಏಕೆ? ವಿಶ್ಲೇಷಣೆ : ಗುರುರಾಜ ದೇಸಾಯಿ

Donate Janashakthi Media

Leave a Reply

Your email address will not be published. Required fields are marked *