ಆದಿವಾಸಿ ಶಾಲೆಗಳ ಸ್ಥಿತಿಗತಿ ಪರಿಶೀಲನೆಗೆ ‘ಆದಿವಾಸಿ ಸ್ಕೂಲ್ ಠೀಕ್ ಕರೋ’ ಅಭಿಯಾನ

ಗಡ್ಚಿರೋಲಿ: ದೇಶದ ಆದಿವಾಸಿ ಪ್ರದೇಶಗಳಲ್ಲಿರುವ ಶಾಲೆಗಳ ಮೂಲಸೌಕರ್ಯ, ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಶಿಕ್ಷಣದ ಗುಣಮಟ್ಟದ ಕುರಿತು ಗಮನ ಸೆಳೆಯಲು ‘ಕಾಕ್‌ರೋಚ್ ಜನತಾ ಪಾರ್ಟಿ’ (CJP) ಮಹಾರಾಷ್ಟ್ರದ ಗಡ್ಚಿರೋಲಿಯಿಂದ ‘ಆದಿವಾಸಿ ಸ್ಕೂಲ್ ಠೀಕ್ ಕರೋ’ ಅಭಿಯಾನ ಆರಂಭಿಸಲು ಮುಂದಾಗಿದೆ. ಸೆಪ್ಟೆಂಬರ್ 17ರಿಂದ ಅಭಿಯಾನ ಆರಂಭವಾಗಲಿದೆ ಎಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ ತಿಳಿಸಿದ್ದಾರೆ. ಆದಿವಾಸಿ

ಗಡ್ಚಿರೋಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿಪ್ಕೆ, ದೇಶದ ಆದಿವಾಸಿ ಪ್ರದೇಶಗಳಲ್ಲಿನ ಶಾಲೆಗಳು ದೀರ್ಘಕಾಲದಿಂದ ನಿರ್ಲಕ್ಷ್ಯಕ್ಕೆ ಒಳಗಾಗಿವೆ ಎಂದು ಆರೋಪಿಸಿದರು. ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ತಾರತಮ್ಯ, ಶಾಲೆಗಳಲ್ಲಿನ ಮೂಲಸೌಕರ್ಯದ ಕೊರತೆ ಹಾಗೂ ವಸತಿ ಶಾಲೆಗಳ ಸ್ಥಿತಿಗತಿಗಳತ್ತ ಸರ್ಕಾರದ ಗಮನ ಸೆಳೆಯುವುದು ಅಭಿಯಾನದ ಉದ್ದೇಶ ಎಂದು ಅವರು ಹೇಳಿದರು.

ಅಭಿಯಾನದ ಭಾಗವಾಗಿ ಸಿಜೆಪಿ ಪ್ರತಿನಿಧಿಗಳು ವಿವಿಧ ಆದಿವಾಸಿ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ಕಟ್ಟಡಗಳು, ತರಗತಿ ಕೊಠಡಿಗಳು, ಕುಡಿಯುವ ನೀರು, ವಸತಿ, ಸ್ವಚ್ಛತೆ ಸೇರಿದಂತೆ ಲಭ್ಯವಿರುವ ಮೂಲಸೌಕರ್ಯಗಳನ್ನು ಪರಿಶೀಲಿಸಲಿದ್ದಾರೆ. ಶಾಲೆಗಳಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ನೇರವಾಗಿ ದಾಖಲಿಸಿ ಸರ್ಕಾರದ ಗಮನಕ್ಕೆ ತರುವ ಉದ್ದೇಶವೂ ಅಭಿಯಾನದಲ್ಲಿದೆ.

ಆದಿವಾಸಿ ವಿದ್ಯಾರ್ಥಿಗಳಿಗಾಗಿ ನಡೆಯುತ್ತಿರುವ ಹಲವು ವಸತಿ ಶಾಲೆಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ದಿಪ್ಕೆ ಆರೋಪಿಸಿದ್ದಾರೆ. ರಾಜಕೀಯ ಪಕ್ಷಗಳು ತಮ್ಮ ಕಚೇರಿಗಳ ನಿರ್ಮಾಣಕ್ಕೆ ದೊಡ್ಡ ಮೊತ್ತದ ಹಣ ಖರ್ಚು ಮಾಡುತ್ತವೆ. ಆದರೆ ಆದಿವಾಸಿ ವಿದ್ಯಾರ್ಥಿಗಳ ವಸತಿ ಶಾಲೆಗಳಿಗೆ ಅಗತ್ಯ ಸೌಲಭ್ಯ ಒದಗಿಸಲು ಸಾಕಷ್ಟು ಹಣ ದೊರೆಯುತ್ತಿಲ್ಲ ಎಂಬುದು ಅವರ ಆರೋಪವಾಗಿದೆ. ಈ ಕುರಿತು ಸರ್ಕಾರ ಆದ್ಯತೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಆದಿವಾಸಿ

ಇದನ್ನೂ ಓದಿ : ಎಸ್‌ಐಆರ್‌ನಲ್ಲಿ ಆಧಾರ್‌ ಸ್ವೀಕಾರದ ಗೊಂದಲ | ಮತದಾರರಿಗೆ ಹೆಚ್ಚಿದ ಆತಂಕ

ದೇಶದ ಆರ್ಥಿಕ ಬೆಳವಣಿಗೆ ಮತ್ತು ದೊಡ್ಡ ಆರ್ಥಿಕ ಗುರಿಗಳ ಕುರಿತು ಮಾತನಾಡುವುದರ ಜೊತೆಗೆ ಗ್ರಾಮೀಣ ಹಾಗೂ ಆದಿವಾಸಿ ವಿದ್ಯಾರ್ಥಿಗಳ ಶಿಕ್ಷಣದ ಮೇಲೂ ಸಮಾನ ಗಮನ ಹರಿಸಬೇಕಿದೆ ಎಂದು ದಿಪ್ಕೆ ಹೇಳಿದ್ದಾರೆ. ದೊಡ್ಡ ನಗರಗಳ ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಷ್ಟೇ ಗ್ರಾಮೀಣ ಮತ್ತು ಆದಿವಾಸಿ ಪ್ರದೇಶಗಳ ವಿದ್ಯಾರ್ಥಿಗಳೂ ದೇಶದ ಭವಿಷ್ಯದ ಭಾಗವಾಗಿದ್ದಾರೆ. ಆದ್ದರಿಂದ ಅವರ ಶಿಕ್ಷಣಕ್ಕೆ ಅಗತ್ಯವಾದ ಮೂಲಸೌಕರ್ಯ ಮತ್ತು ಸುರಕ್ಷಿತ ವಾತಾವರಣ ಕಲ್ಪಿಸುವುದು ಸರ್ಕಾರದ ಜವಾಬ್ದಾರಿ ಎಂದು ಅವರು ಪ್ರತಿಪಾದಿಸಿದ್ದಾರೆ.ಆದಿವಾಸಿ

ಮಹಾರಾಷ್ಟ್ರದ ಆದಿವಾಸಿ ಪ್ರದೇಶಗಳಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳು ತೀವ್ರವಾಗಿರುವ ಹಿನ್ನೆಲೆಯಲ್ಲಿ ಈ ಅಭಿಯಾನ ಆರಂಭಿಸಲಾಗುತ್ತಿದೆ. ಇತ್ತೀಚೆಗೆ ಗಡ್ಚಿರೋಲಿಯ ಸರ್ಕಾರಿ ಅನುದಾನಿತ ಆಶ್ರಮ ಶಾಲೆಯಲ್ಲಿ ಹಾವು ಕಡಿತದಿಂದ ಮೂವರು ಆದಿವಾಸಿ ಮಕ್ಕಳು ಮೃತಪಟ್ಟ ಘಟನೆ ಸೇರಿದಂತೆ ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಪ್ರಶ್ನೆಗಳು ಎದ್ದಿವೆ. ಈ ಹಿನ್ನೆಲೆಯಲ್ಲಿ ಬಾಂಬೆ ಹೈಕೋರ್ಟ್ ಕೂಡ ಆದಿವಾಸಿ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿರುವುದಾಗಿ ವರದಿಯಾಗಿದೆ.

ಇದಕ್ಕೂ ಒಂದು ತಿಂಗಳ ಹಿಂದೆ ಸಿಜೆಪಿ ದೇಶಾದ್ಯಂತ ಸರ್ಕಾರಿ ಶಾಲೆಗಳ ಸ್ಥಿತಿಗತಿ ಸುಧಾರಣೆಗೆ ‘ಸ್ಕೂಲ್ ಠೀಕ್ ಕರೋ’ ಅಭಿಯಾನ ಆರಂಭಿಸಿತ್ತು. ಅದರ ಮುಂದುವರಿದ ಭಾಗವಾಗಿ ಇದೀಗ ಆದಿವಾಸಿ ಶಾಲೆಗಳ ಸಮಸ್ಯೆಗಳನ್ನು ಪ್ರತ್ಯೇಕವಾಗಿ ಗುರುತಿಸಿ ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಗಡ್ಚಿರೋಲಿಯಿಂದ ‘ಆದಿವಾಸಿ ಸ್ಕೂಲ್ ಠೀಕ್ ಕರೋ’ ಅಭಿಯಾನ ಆರಂಭಿಸಲಾಗುತ್ತಿದೆ. ಆದಿವಾಸಿ

ಇದನ್ನೂ ನೋಡಿ : ಗಂಗಾಧರಸ್ವಾಮಿ ನುಡಿನಮನ| ಸಮರಶೀಲ ರಂಗಪಥದ ಪಯಣಿಗ Janashakthi Media

Donate Janashakthi Media

Leave a Reply

Your email address will not be published. Required fields are marked *