ಪಡಿತರ ಅಕ್ಕಿ ಅಕ್ರಮ ಸಾಗಾಟ ವಾಹನ ಜಪ್ತಿ

ಹೊಸಪೇಟೆ : ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ  ಬಳಿ ‌ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 4.83 ಕ್ವಿಂಟಾಲ್ ಪಡಿತರ ಅಕ್ಕಿ ವಶಕ್ಕೆ ಪಡೆಯಲಾಗಿದೆ.

ಅಕ್ಕಿ ಪಾಲಿಸ್ ಮಾಡಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಹೊರಟಿದ್ದ ವಾಹನದ ಮೇಲೆ ಆಹಾರ ಇಲಾಖೆ ಹಾಗೂ ಪೊಲೀಸರ ದಾಳಿ ನಡೆಸಿದ್ದು, ಗೂಡ್ಸ್ ಕ್ಯಾರಿಯರ್  ವಾಹನ ಕೂಡ ಜಪ್ತಿ ಮಾಡಿದ್ದಾರೆ.

ಮರಿಯಮ್ಮನಹಳ್ಳಿ ಠಾಣೆ ಪಿಎಸ್ಐ ಶಿವಕುಮಾರ್ ಹಾಗೂ ಆಹಾರ ಇಲಾಖೆಯ ಶಿರಸ್ತೇದಾರ್ ನಾಗರಾಜ್ ದಾಳಿ ನಡೆಸಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟವನ್ನು ಬಯಲಿಗೆ ತಂದಿದ್ದಾರೆ.

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಚನಾಳ್ ಗ್ರಾಮದ ಕರಿಬಸಪ್ಪ, ಹೊಸಪೇಟೆ ನಗರದ ಕೆ.ದಿನೇಶ್ ಹಾಗೂ ಹೊಸಪೇಟೆ ತಾಲೂಕಿನ ಗರಗ ಗ್ರಾಮದ ಶಿವರಾಜ ಎಂಬುವರನ್ನು ಮರಿಯಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *