ಕರ್ತವ್ಯ ಲೋಪ: ಪಿಎಸ್ಐ ಸೇರಿ 8 ಪೊಲೀಸರ ಅಮಾನತು

ಬೆದರಿಸಿ ಹಣ ವಸೂಲಿ ಮಾಡಿದ ಆರೋಪ

ಚಿಕ್ಕಮಗಳೂರು: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಬಸವನಹಳ್ಳಿ ಮತ್ತು ತಾಲೂಕಿನ ಆಲ್ದೂರು ಠಾಣೆಯ ಒಬ್ಬ ಸಬ್ ಇನ್ಸ್ ಪೆಕ್ಟರ್ ಹಾಗೂ 7 ಮಂದಿ ಪೊಲೀಸ್ ಪೇದೆಗಳನ್ನು ಅಮಾನತು ಮಾಡಲಾಗಿದೆ.

ಗಾಂಜಾ ಪ್ರಕರಣ ಫಿಕ್ಸ್ ಮಾಡುವುದಾಗಿ ಬೆದರಿಸಿ ನಗರದ ಇಬ್ಬರನ್ನು ಬೆದರಿಸಿ ಮೂರು ಲಕ್ಷ ರೂ.ಗಳಿಗೂ ಹೆಚ್ಚು ಹಣ ವಸೂಲು ಮಾಡಿದ್ದ ಎಸ್ಐ ಸುಖೇತ್, ಪೇದೆಗಳಾದ ಯುವರಾಜ್, ಲಕ್ಷ್ಮಣ್, ಪ್ರದೀಪ್ ಅವರನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತು ಮಾಡಲಾಗಿದೆ.

ಮತ್ತೊಂದು ಪ್ರಕರಣ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೋಂ ಸ್ಟೇ ಮಾಲೀಕನನ್ನು ಬೆದರಿಸಿ ಹಣ ಪಡೆದಿದ್ದ ಪ್ರರಣದಲ್ಲಿ ಠಾಣೆಯ ಪೇದೆಗಳಾದ ಶಶಿಧರ್, ಸ್ವಾಮಿ, ನವೀನ್, ಅರುಣಕುಮಾರ್ ಅವರುಗಳನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Donate Janashakthi Media

Leave a Reply

Your email address will not be published. Required fields are marked *