ಗುರುತು ಸಿಗಬಾರದು ಎಂದು ಮೋದಿ ಗಡ್ಡ ಬಿಟ್ಟಿದ್ದಾರೆ – ಸಿದ್ಧರಾಮಯ್ಯ

ಬೆಂಗಳೂರು, ಫೆ 21; ಪ್ರಧಾನಿ ನರೇಂದ್ರ ಮೋದಿ ಗಡ್ಡ ಬಿಟ್ಟಿದ್ದಾರೆ. ಕಳೆದ ವರ್ಷ ಕೋವಿಡ್ ಪರಿಸ್ಥಿತಿ ಆರಂಭವಾದಾಗಿನಿಂದ ಮೋದಿ ಗಡ್ಡಬಿಟ್ಟಿದ್ದು, ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಮೋದಿ ಬಿಳಿಯ ಗಡ್ಡದ ಬಗ್ಗೆ ಹಲವಾರು ಚರ್ಚೆಗಳು ನಡೆಯುತ್ತಿವೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭಾನುವಾರ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಬೆಲೆ ಏರಿಕೆ ಬಗ್ಗೆ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಮೋದಿ ಗಡ್ಡದ ಬಗ್ಗೆಯೂ ಉಲ್ಲೇಖಿಸಿದ್ದಾರೆ.

ಪ್ರತಿನಿತ್ಯ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ, ಜನಸಾಮಾನ್ಯರು ಕಷ್ಟದಲ್ಲಿ ದಿನ ದೂಡುವಂತಾಗಿದೆ. ದೇಶದ ಈ ದುಸ್ಥಿತಿಗೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ ತಮ್ಮ ಗುರುತು ಸಿಗಬಾರದು ಅಂತ ಗಡ್ಡ ಬೆಳೆಸಿಕೊಂಡಿದ್ದಾರೆ” ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಸುಳ್ಳಿಗೆ ಪರ್ಯಾದ ಪದವೆಂದರೆ ಅದು ನರೇಂದ್ರ ಮೋದಿ ಅವರ ಚುನಾವಣಾ ಪೂರ್ವದ ಭಾಷಣ. ಮೋದಿ, ಮೋದಿ ಅಂತ ಘೋಷಣೆ ಕೂಗುತ್ತಾ, ಅಧಿಕಾರ ಕೊಟ್ಟ ಜನರೇ ಇಂದು ಮೋಸಹೋಗಿದ್ದಾರೆ” ಎಂದು ಸಿದ್ದರಾಮಯ್ಯ ದೂರಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಯಾವ ಅಭಿವೃದ್ಧಿ ಕಾರ್ಯಗಳಿಗೂ ಸರ್ಕಾರದ ಬಳಿ ಹಣ ಇಲ್ಲ ಎನ್ನುತ್ತಾರೆ. ಸರ್ಕಾರ ನಡೆಸೋಕೆ ಆಗಲ್ಲ ಅಂದಮೇಲೆ ಮುಖ್ಯಮಂತ್ರಿಯಾಗಿ ಯಾಕಿದೀರಿ?” ಎಂದು ಪ್ರಶ್ನಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *