ಚಲನಚಿತ್ರ ಕಾರ್ಮಿಕರಿಗೆ ಕೋವಿಡ್ ಲಸಿಕೆ: ಅಭಿಯಾನಕ್ಕೆ ಚಾಲನೆ

ಬೆಂಗಳೂರು: ಕೊರೊನಾ ಸೋಂಕಿನಿಂದ ಎಲ್ಲಾ ಜನರನ್ನು ಸಂರಕ್ಷಿಸುವ ಉದ್ದೇಶದಿಂದ ಹಲವೆಡೆ ಹಲವು ರೀತಿಯಲ್ಲಿ ಅಭಿಯಾನಗಳನ್ನು ನಡೆಯುತ್ತಿದೆ. ಕೋವಿಡ್‌ ಲಸಿಕೆ ಅಭಿಯಾನಕ್ಕೆ ಈಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿಯೂ ಚಾಲನೆ ದೊರೆತಿದೆ.

ಚಲನಚಿತ್ರ ರಂಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 22 ಸಾವಿರ ವೃತ್ತಿಪರರು, ಕಾರ್ಮಿಕರಿಗೆ ಲಸಿಕೆ ನೀಡುವ ನಿಟ್ಟಿನಲ್ಲಿ ಅಭಿಯಾನ ಆರಂಭಗೊಂಡಿದೆ.

ನಗರದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಸಣ್ಣ ಕೈಗಾರಿಕೆ, ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಸಚಿವ ಸಿ ಸಿ ಪಾಟೀಲ್‌, ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌, ಮಂಡಳಿಯ ಅಧ್ಯಕ್ಷ ಜೈರಾಜ್, ಹಿರಿಯ ನಿರ್ಮಾಪಕ ಸಾರಾ ಗೋವಿಂದು, ಹಿರಿಯ ನಟಿ ಶ್ರೀಮತಿ ತಾರಾ ಅನೂರಾಧ ಉಪಸ್ಥಿತರಿದ್ದರು.

Donate Janashakthi Media

Leave a Reply

Your email address will not be published. Required fields are marked *