ಸಾಲುಸಾಲು ಹಬ್ಬಗಳು: ಕೋವಿಡ್ ನಿಯಂತ್ರಣಕ್ಕೆ ತಂತ್ರ ಪಾಲಿಸಿ, ಸ್ಥಳೀಯ ನಿರ್ಬಂಧ ಕೈಗೊಳ್ಳಲು ರಾಜ್ಯಗಳಿಗೆ ಕೇಂದ್ರ ಪತ್ರ

ನವದೆಹಲಿ: ಮುಂಬರುವ ಕೆಲವು ದಿನಗಳ ನಂತರದಲ್ಲಿ ಸಾಲುಸಾಲು ಹಬ್ಬಗಳು ಆರಂಭಗವಾತ್ತಿದ್ದು, ಕೋವಿಡ್ ಸಾಂಕ್ರಾಮಿಕ ರೋಗದ ಮೂರನೇ ಅಲೆ ಎದುರಾಗದಂತೆ ತಡೆಯುವ ತುರ್ತು ಅವಶ್ಯಕತೆ ಇರುವುದರಿಂದ ಕೇಂದ್ರ ಸರ್ಕಾರ ಕೋವಿಡ್ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ತರಲು ಅಗತ್ಯವಿರುವ ಕಡೆಗಳಲ್ಲಿ ಹೆಚ್ಚಿನ ನಿರ್ಬಂಧಗಳನ್ನು ವಿಧಿಸಬೇಕೆಂದು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರವೂ ಪತ್ರ ಬರೆದಿದೆ.

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದು, ‘ಮುಂಬರುವ ದಿನಗಳಲ್ಲಿ ಸಾಲುಸಾಲು ಹಬ್ಬಗಳಲ್ಲಿ ಯಾವುದೇ ಹೆಚ್ಚಿನ ಜನಜಂಗುಳಿ ಉಂಟಾಗದಂತ ಮುಂಜಾಗ್ರತವಾಗಿ ಖಚಿತಪಡಿಸಿಕೊಳ್ಳಲು ಮತ್ತು ಅಗತ್ಯವಿದ್ದಲ್ಲಿ ಕೊರೋನವೈರಸ್ ಹರಡುವುದನ್ನು ನಿಯಂತ್ರಿಸಲು ಸ್ಥಳೀಯ ನಿರ್ಬಂಧಗಳನ್ನು ವಿಧಿಸಬೇಕು ಎಂದು ಸೂಚಿಸಿದೆ.

ಇದನ್ನು ಓದಿ: ಲಸಿಕೆ ನೀಡಲು ಹಳ್ಳಿ ಹಳ್ಳಿಗಳಿಗೆ ಸಂಚರಿಸುವ ಬಸ್ಸಿಗೆ ಸಿಎಂ ಬೊಮ್ಮಾಯಿ ಚಾಲನೆ

ಜಾಲ್ತಿಯಲ್ಲಿರುವ ಕೋವಿಡ್-19 ಮಾರ್ಗಸೂಚಿಗಳು ಒಂದು ತಿಂಗಳ ಕಾಲ ಅಂದರೆ, ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಿ ಎಂದು ಹೇಳಿಲಾಗಿದೆ. ಕೆಲವು ರಾಜ್ಯಗಳು ಹೊರತುಪಡಿಸಿ, ದೇಶದಲ್ಲಿ ಸಾಂಕ್ರಾಮಿಕ ಹರಡುವಿಕೆಯ ಪರಿಸ್ಥಿತಿಯು ಸದ್ಯ ಸ್ಥಿರವಾಗಿದೆ. ಕೆಲವು ಜಿಲ್ಲೆಗಳಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು ಮತ್ತು ಹೆಚ್ಚಿನ ಪ್ರಕರಣಗಳ ಸಕಾರಾತ್ಮಕತೆಯು ಕಳವಳಕಾರಿ ವಿಷಯವಾಗಿ ಮುಂದುವರಿದಿದೆ. ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳು, ತಮ್ಮ ಜಿಲ್ಲೆಗಳಲ್ಲಿ ಸೋಂಕು ವ್ಯಾಪಿಸದಂತೆ ತಡೆಯುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ನಿರ್ಬಂಧಿಸಲು ಮತ್ತು ಪ್ರಸರಣದ ಹರಡುವಿಕೆಯನ್ನು ತಡೆಗಟ್ಟಲು ಕಟ್ಟುನಿಟ್ಟಿನ ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

“ಸಂಭಾವ್ಯ ಸೋಂಕು ಉಲ್ಬಣಗಳ ಎಚ್ಚರಿಕೆಯ ಚಿಹ್ನೆಗಳನ್ನು ಮೊದಲೇ ಗುರುತಿಸುವುದು ಮತ್ತು ಹರಡುವುದನ್ನು ತಡೆಯಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದು ಮುಖ್ಯವಾಗಿದೆ. ಏಪ್ರಿಲ್ 25 ಮತ್ತು ಜೂನ್ 28 ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ (ಮೊಹೆಚ್‌ಎಫ್‌ಡಬ್ಲ್ಯು) ಸಲಹೆಗಳಲ್ಲಿ ಉಲ್ಲೇಖಿಸಿರುವಂತೆ ಇದಕ್ಕೆ ಸ್ಥಳೀಯ ಸೂಕ್ತ ವಿಧಾನದ ಅಗತ್ಯವಿದೆ. ಮುಂಬರುವ ಹಬ್ಬದ ಸಮಯದಲ್ಲಿ ದೊಡ್ಡ ಕೂಟಗಳನ್ನು ತಪ್ಪಿಸಲು ಮತ್ತು ಅಗತ್ಯವಿದ್ದಲ್ಲಿ, ಅಂತಹ ಕೂಟಗಳನ್ನು ತಡೆಗಟ್ಟಲು ಸ್ಥಳೀಯ ನಿರ್ಬಂಧಗಳನ್ನು ವಿಧಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಸಲಹೆ ನೀಡಿದರು.

ಎಲ್ಲಾ ಜನನಿಬಿಡ ಸ್ಥಳಗಳಲ್ಲಿ ಕೋವಿಡ್-ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಕೋವಿಡ್ -19 ರ ಪರಿಣಾಮಕಾರಿ ನಿರ್ವಹಣೆಗಾಗಿ ಐದು ಅಂಶಗಳ ತಂತ್ರಗಳಾದ ಟೆಸ್ಟ್-ಟ್ರ್ಯಾಕ್-ಟ್ರೀಟ್-ವ್ಯಾಕ್ಸಿನೇಷನ್ ಮತ್ತು ಕೋವಿಡ್-ಸೂಕ್ತ ನಡವಳಿಕೆಯ ಅನುಸರಣೆ ಗಮನವನ್ನು ಮುಂದುವರಿಸುವ ಅವಶ್ಯಕತೆಯಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.

Donate Janashakthi Media

Leave a Reply

Your email address will not be published. Required fields are marked *