ಪಿಡಿಒಯಿಂದ ರಾಷ್ಟ್ರಪತಿವರೆಗೂ ಆರೆಸ್ಸೆಸ್‌ ನವರೇ ಇದ್ದಾರೆ: ಹೆಚ್‌ಡಿಕೆಗೆ ಪ್ರತಿಕ್ರಿಯಿಸಿದ ಸಚಿವ ಸುನಿಲ್ ಕುಮಾರ್

ಉಡುಪಿ: ಪಂಚಾಯತಿಯ ಪಿಡಿಒ ಗಳಿಂದ ಹಿಡಿದು ರಾಷ್ಟ್ರಪತಿ ತನಕ ಆರ್‌ಎಸ್‌ಎಸ್‌ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಐಎಎಸ್, ಐಪಿಎಸ್ ಅಧಿಕಾರಿಗಳು ಮಾತ್ರವಲ್ಲ, ಪಿಡಿಒಗಳಿಂದ ಹಿಡಿದು ರಾಷ್ಟ್ರಪತಿಯವರೆಗೂ ಆರ್‌ಎಸ್‌ಎಸ್‌ನವರು ಇದ್ದಾರೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

ದೇಶದ ನಾಗರಿಕ ಸೇವೆಯಾದ ಐಎಎಸ್ ಮತ್ತು ಐಪಿಎಸ್ ನಲ್ಲಿ 4,000 ಆರ್‌ಎಸ್‌ಎಸ್‌  ಕಾರ್ಯಕರ್ತರು ಇದ್ದಾರೆ. ದೇಶದಲ್ಲಿ ಅಧಿಕಾರ ನಡೆಸುತ್ತಿರುವುದು ಆರ್‌ಎಸ್‌ಎಸ್‌ ನವರು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಈ ಹಿಂದೆ ಹೇಳಿಕೆ ನೀಡಿದ್ದರು. ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಸುನೀಲ್‌ ಕುಮಾರ್‌ ಮೇಲಿನಂತೆ ಹೇಳಿಕೆ ನೀಡಿದ್ದಾರೆ.

ಇಂದು ಮಣಿಪಾಲದ ಸಿದ್ಧಿ ವಿನಾಯಕ ದೇವಾಸ್ಥಾನದ ಬಳಿಯ ಸ್ವರ್ಣಾ ನದಿಗೆ ಬಾಗಿನ ಅರ್ಪಿಸಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು.

‘ಅಪ್ಪ ಮಕ್ಕಳು’ ಬೇರೆ ಬೇರೆ ಸಂದರ್ಭಗಳಲ್ಲಿ ಆರ್‌ಎಸ್‌ಎಸ್‌ ಸಂಸ್ಥೆಯನ್ನು ಬಳಕೆ ಮಾಡಿಕೊಂಡಿದ್ದಾರೆ. ಖುಷಿ ಬಂದಂತೆ ಬಳಕೆ ಮಾಡಿಕೊಳ್ಳುವ ಸಂಸ್ಥೆ ಆರ್‌ಎಸ್‌ಎಸ್ ಅಲ್ಲ ಎಂದು ಸಚಿವ ಸುನೀಲ್ ಕುಮಾರ್ ಅವರು ಹೆಚ್‌.ಡಿ.ಕುಮಾರಸ್ವಾಮಿಗೆ ತಿರುಗೇಟು ನೀಡಿದರು.

Donate Janashakthi Media

Leave a Reply

Your email address will not be published. Required fields are marked *