ನಟ ಪುನೀತ್‌ ರಾಜ್‌ಕುಮಾರ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ನಟ ಪುನೀತ್​ ರಾಜ್​ಕುಮಾರ್​ ಅವರ ಆರೋಗ್ಯದಲ್ಲಿ ಇಂದು ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡುತ್ತಿದ್ದಾರೆ.

ಮನೆಯಲ್ಲಿರುವ ಜಿಮ್ ನಲ್ಲಿ ಕಸರತ್ತು ಮಾಡುವಾಗ ಆರೋಗ್ಯದಲ್ಲಿ ಏರುಪೇರಾಗಿತ್ತು ಎಂದು ತಿಳಿದುಬಂದಿದೆ. ಜಿಮ್ ಮಾಡುವಾಗ ನಟ ಪುನೀತ್ ರಾಜಕುಮಾರ್‌ ಅಲ್ಲಿಯೇ ಕುಸಿದು ಬಿದ್ದಿರು. ತಕ್ಷಣ ಅವರ ಆಪ್ತ ಸಹಾಯಕರು ನಟನನ್ನು ಆಸ್ಪತ್ರೆಗೆ ಕರೆತಂದಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಪುನೀತ್‌ ರಾಜಕುಮಾರ್‌ ಅವರನ್ನು ವಿಕ್ರಂ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಇಸಿಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಮೇಲ್ನೋಟಕ್ಕೆ ಗಂಭೀರ ಆರೋಗ್ಯ ಸಮಸ್ಯೆಯಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಶಿವರಾಜ್ ಕುಮಾರ್ ಪುತ್ರಿ ಸೇರಿದಂತೆ ಹಲವರು ಆಸ್ಪತ್ರೆಗೆ ಈಗಾಗಲೇ ಆಗಮಿಸಿದ್ದಾರೆ. ನಾಲ್ಕು ಗಂಟೆಗಳ ಹಿಂದಷ್ಟೇ ಶಿವಣ್ಣ ಅಭಿಯನದ ಭಜರಂಗಿ-2 ಚಿತ್ರದ ಯಶಸ್ಸು ಕೋರಿ ಇಡೀ ಚಿತ್ರತಂಡಕ್ಕೆ ಪುನೀತ್ ರಾಜಕುಮಾರ್ ಶುಭ ಕೋರಿದರು. ನಂತರ ಅವರ ಆರೋಗ್ಯ ಸಮಸ್ಯೆ ಬಿಗಡಾಯಿಸಿದೆ.

ಪ್ರತಿದಿನ ಜಿಮ್​ನಲ್ಲಿ ಕಸರತ್ತು ಮಾಡುವ ಪುನೀತ್‌ ರಾಜಕುಮಾರ್‌ ಆರೋಗ್ಯದ ಬಗ್ಗೆ ಅವರಿಗೆ ಹೆಚ್ಚಿನ ಕಾಳಜಿ ಇದೆ. ಹಾಗಿದ್ದರೂ ಕೂಡ ಏಕಾಏಕಿ ಅನಾರೋಗ್ಯ ಉಂಟಾಗಿರುವುದು ಆತಂಕಕ್ಕೆ ಎಡೆಮಾಡಿದೆ.

ಆಸ್ಪತ್ರೆ ಬಳಿ ಪುನೀತ್‌ ರಾಜಕುಮಾರ್ ಅಭಿಮಾನಿಗಳು ಆಗಮಿಸುತ್ತಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ನಿವಾಸದ ಬಳಿಯೂ ಭಾರೀ ಭದ್ರತೆ ಒದಗಿಸಲಾಗಿದೆ.‌

ಪುನೀತ್‌ ರಾಜುಮಾರ್‌ ಅಭಿಮಾನಿಗಳು, ಆಪ್ತರು, ಸಿನಿ ಗಣ್ಯರು, ಕುಟುಂಬಸ್ಥರು ಹಾಗೂ ಸ್ನೇಹಿತರು ಸೇರಿ ಹಲವರು ಆಸ್ಪತ್ರೆ ಸುತ್ತ ಜನಸಂದಣಿ ಹೆಚ್ಚಾಗುತ್ತಿದ್ದು, ಇದು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ  ಇರುವ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಯು ಮತ್ತಷ್ಟು ಸಿಬ್ಬಂದಿಯನ್ನು ಸ್ಥಳಕ್ಕೆ ಆಗಮಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *