ಉಗ್ರರ ದಾಳಿ: ಐವರು ಯೋಧರು ಸೇರಿ ಒಟ್ಟು 7 ಮಂದಿ ಸಾವು

ಮಯನ್ಮಾರ್: ಉಗ್ರರು ನಡೆಸಿದ ದಾಳಿಯಿಂದಾಗಿ ಭಾರತೀಯ ಸೇನೆಯ ನಾಲ್ವರು ಯೋಧರು, ಅಸ್ಸಾಂ 46 ರೈಫಲ್​​ನ ಕಮಾಂಡಿಂಗ್​ ಅಧಿಕಾರಿ, ಅವರ ಮಗ, ಪತ್ನಿ ಸೇರಿ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ.

ಮಣಿಪುರದ ಮಯನ್ಮಾರ್​ ಗಡಿಯ ಸಿಂಘಾತ್‌ನಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಈ ದಾಳಿ ನಡೆದಿದೆ. ಮಣಿಪುರ ಮೂಲದ ಬಂಡುಕೋರರ ಗುಂಪು ಪೀಪಲ್ಸ್​ ಲಿಬರೇಶನ್​ ಆರ್ಮಿ ಈ ದಾಳಿ ನಡೆಸಿದ್ದಾಗಿ ಮಾಹಿತಿ ಇದೆ. ಘಟನೆಯಲ್ಲಿ ಗಾಯಗೊಂಡ ಮೂವರನ್ನು ಬೆಹಿಯಾಂಗ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಇದನ್ನು ಓದಿ: ಸೇಲ್ಸ್‌ಮನ್ ಅನ್ನು ಗುಂಡಿಟ್ಟು ಕೊಂದ ಉಗ್ರರು

ಹುತಾತ್ಮರಾದ ಕಮಾಂಡಿಂಗ್​ ಆಫೀಸರ್​​ನ್ನು ಕರ್ನಲ್​ ವಿಪ್ಲವ್​ ತ್ರಿಪಾಠಿ ಎಂದು ಗುರುತಿಸಲಾಗಿದೆ.  ಇವರು ಮಯನ್ಮಾರ್ ಗಡಿಯಲ್ಲಿ ಇದ್ದವರು, ದಾಳಿ ನಡೆಯುವ ಸಂದರ್ಭದಲ್ಲಿ ಅಲ್ಲಿಂದ ಕುಟುಂಬದೊಂದಿಗೆ ಹಿಂತಿರುಗುತ್ತಿದ್ದರು.

ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಯೋಧರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಐವರು ವೀರ ಯೋಧರನ್ನು ಈ ದೇಶ ಇಂದು ಕಳೆದುಕೊಂಡಿದೆ. ಅದರಲ್ಲೂ ಕಮಾಂಡಿಂಗ್ ಅಧಿಕಾರಿಯ ಕುಟುಂಬವನ್ನು ಟಾರ್ಗೆಟ್​ ಮಾಡಿದ್ದು ನಿಜಕ್ಕೂ ದುರಂತ.  ಈ ಸಾವಿಗೆ ನ್ಯಾಯ ಒದಗಿಸದೆ ಸುಮ್ಮನಾಗುವುದಿಲ್ಲ ಎಂದಿದ್ದಾರೆ.

ಉಗ್ರರ ದಾಳಿಯಯನ್ನು ಖಂಡಿಸಿ ಮಣಿಪುರ ಮುಖ್ಯಮಂತ್ರಿ ಎನ್​.ಬಿರನ್​ ಸಿಂಗ್​ ಟ್ವೀಟ್​ ಮಾಡಿದ್ದು, 46 ಅಸ್ಸಾಂ ರೈಫಲ್ಸ್​ ಮೇಲೆ ಉಗ್ರರು ಹೇಡಿತನದಿಂದ, ಹೊಂಚು ಹಾಕಿ ದಾಳಿ ಮಾಡಿದ್ದು ಖಂಡನೀಯ. ಸಿಸಿಪುರ ಎಂಬಲ್ಲಿ ನಡೆದ ಈ ದಾಳಿಯಲ್ಲಿ ಕಮಾಂಡಿಂಗ್​ ಅಧಿಕಾರಿ ಮತ್ತವರ ಕುಟುಂಬವೂ ಹತ್ಯೆಗೀಡಾಗಿದೆ. ಯೋಧರು ಹುತಾತ್ಮರಾಗಿದ್ದಾರೆ. ಉಗ್ರರನ್ನು ಸೆರೆಹಿಡಿಯಲು ರಾಜ್ಯದ ಭದ್ರತಾ ಪಡೆಗಳು ಮತ್ತು ಪ್ಯಾರಾಮಿಲಿಟರಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ಖಂಡಿತ ಆಗುತ್ತದೆ ಎಂದು ಹೇಳಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *