ಅನೈತಿಕ ಪೊಲೀಸ್ ಗಿರಿ : ಸಂಘಪರಿವಾರದ ಕಾರ್ಯಕರ್ತರಿಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ

ಮಂಗಳೂರು : ಮಂಗಳೂರಿನಲ್ಲಿ ಸಂಘಪರಿವಾರದ ಕಾರ್ಯಕರ್ತರಿಂದ ಮತ್ತೆ ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ.

ನಗರದ ಹೃದಯ ಭಾಗದಲ್ಲಿರುವ ಸ್ಟೇಟ್ ಬ್ಯಾಂಕ್ ಖಾಸಗಿ ಬಸ್ ನಿಲ್ದಾಣದ ಬಳಿ ಮಂಗಳೂರಿನಿಂದ ಉಡುಪಿಗೆ ತೆರಳಲು ಬಸ್ಸಿನಲ್ಲಿ ಕುಳಿತಿದ್ದ ಸಹಪಾಠಿಗಳಿಗೆ ಸಂಘಪರಿವಾರದವರು ಹಿಡಿದು ಥಳಿಸಿದ ಘಟನೆ ನಡೆದಿದೆ.

ಯುವಕ ಶಿವಮೊಗ್ಗ ಮೂಲದವನಾಗಿದ್ದು,  ಯುವತಿ ಉಡುಪಿಯವರು ಎಂದು ಗುರುತಿಸಲಾಗಿದೆ. ಇಬ್ಬರು ಮಂಗಳೂರಿನ ವಾಮಂಜೂರಿನ ಖಾಸಗಿ ಕಾಲೇಜೊಂದರಲ್ಲಿ ಸಹಪಾಠಿಗಳಾಗಿದ್ದು, ಇಬ್ಬರು ಉಡುಪಿಗೆ ತೆರಳುವ ಬಸ್ಸಿನಲ್ಲಿ ಕುಳಿತಿದ್ದರು. ಇದನ್ನು ಗಮನಿಸಿ ಬಸ್ಸಿನ ಒಳಗೆ ಬಂದ ಸಂಘಪರಿವಾರಕ್ಕೆ ಸೇರಿದ ಬಸ್ ನಿರ್ವಾಹಕ ಮತ್ತು ಇತರ ಕಾರ್ಯಕರ್ತರು ಯುವಕ ಮೇಲೆ ಹಲ್ಲೆ ನಡೆಸಿ ವಿದ್ಯಾರ್ಥಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡು ಅವಮಾನೀಯವಾಗಿ ವರ್ತಿಸಿದ್ದಾರೆ.  ಯುವಕನ ಐಡಿ ಹಾಗೂ ವಿಳಾಸವನ್ನು ಕೇಳಿ ಧಮ್ಕಿ ಹಾಕುವ ವೀಡಿಯೋ ವೈರಲ್ ಆಗಿದೆ.

ಬಸ್ ನಿಲ್ದಾಣದಲ್ಲಿ ಅವರನ್ನು ಇಳಿಸಿ ಸಾರ್ವಜನಿಕ ರ ಮುಂದೆ ಗುಂಪುಕಟ್ಟಿ ನಿಂದಿಸಲಾಗಿದ್ದು, ಅವರ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸರಣಗೊಳ್ಳುತ್ತಿದ್ದು, ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *