ಕ್ಷುಲ್ಲಕ ಕಾರಣ : ಬಜರಂಗದಳ ಮುಖಂಡನಿಂದ ದಲಿತನ ಹತ್ಯೆ

ಬೆಳ್ತಂಗಡಿ: ಧರ್ಮಸ್ಥಳ ಸಮೀಪದ ಕನ್ಯಾಡಿ ಗ್ರಾಮದ ದಿನೇಶ್ ಎಂಬ ದಲಿತ ಯುವಕನನ್ನು ಅದೇ ಗ್ರಾಮದ ಕೃಷ್ಣ ಎಂಬ ಬಜರಂಗದಳದ ಮುಖಂಡನೊಬ್ಬ ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿದ್ದಾನೆ.

ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಈ ಘಟನೆ ಸೆರೆಯಾಗಿದ್ದು,ಈ ವೀಡಿಯೋದಲ್ಲಿ ದಿನೇಶ್ ಎಂಬಾತನನ್ನು ಬಜರಂಗದಳದ ಮುಖಂಡ ಕೃಷ್ಣ ಎಳೆದು ಹಾಕಿ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ವೆನ್ಲಾಕ್ ಗೆ ದಾಖಲಾಗಿದ್ದ ದಿನೇಶ್, ಫೆಬ್ರವರಿ 25 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಘಟನೆಯ ಕುರಿತು ಮೃತನ ತಾಯಿ ಪದ್ಮಾವತಿ ಅವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ದೂರಿನನ್ವಯ ಪೊಲೀಸರು ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 302 ಸೇರಿದಂತೆ ವಿವಿಧ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಕೃಷ್ಣ ಪರಾರಿಯಾಗಿದಾನೆ ಎಂಬ ಮಾಹಿತಿ ಲಭ್ಯವಾಗಿದೆ.

Donate Janashakthi Media

Leave a Reply

Your email address will not be published. Required fields are marked *