ಪಿಎಸ್‌ಐ ಪರೀಕ್ಷಾ ಅಕ್ರಮ – ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷನ ಬಂಧನ

ಕಲಬುರಗಿ: ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌(ಪಿಎಸ್‌ಐ) ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕರೊಬ್ಬರನ್ನು ಸಿಐಡಿ ಬಂಧಿಸಿದೆ.

ಅಫಜಲಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ್ ಪಾಟೀಲ್ ಬಂಧಿತ ಆರೋಪಿ. ಈ ಮೂಲಕ ಈ ಅಕ್ರಮ ಪ್ರಕರಣ ಕಾಂಗ್ರೆಸ್‌ ಬುಡಕ್ಕೂ ಬಂದಿದೆ. ಬ್ಲೂಟೂತ್ ಡಿವೈಸ್ ಬಳಕೆ ಮಾಡಿ ಪರೀಕ್ಷೆ ಬರೆಸುವಲ್ಲಿ ಅಕ್ರಮ ಎಸಗಿದ್ದ ಈತನನ್ನು ಅಫಜಲಪುರ ಪಟ್ಟಣದ ನ್ಯಾಷನಲ್ ಫಂಕ್ಷನ್ ಹಾಲ್‌ನಲ್ಲಿ ಬಂಧಿಸಲಾಗಿದೆ.

ಮಹಾಂತೇಶ್‌ ಪಾಟೀಲ್ ಕಾಂಗ್ರೆಸ್ ಅವಧಿಯಲ್ಲಿ ಹಲವು ಉನ್ನತ ಸ್ಥಾನ ಪಡೆದಿದ್ದ. ಈ ಹಿಂದೆ ಸಿದ್ದರಾಯ್ಯ ಸರ್ಕಾರದ ಅವಧಿಯಲ್ಲಿ ಹಿಂದುಳಿದ ವರ್ಗಗಗಳ ಶಾಶ್ವತ ಆಯೋಗದ ಸದಸ್ಯರಾಗಿದ್ದ. ಶನಿವಾರ ಮಹಾಂತೇಶ್‌ ಪಾಟೀಲ್ ಹಾಗೂ ಆತನ ಸಹೋದರ ಆರ್.ಡಿ.ಪಾಟೀಲ್ 101 ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಇದನ್ನೂ ಓದಿ : ಪಿಎಸ್‌ಐ ಅಕ್ರಮ ಪರೀಕ್ಷೆ : ಎಬಿವಿಪಿ ಮುಖಂಡ ಶ್ಯಾಮೀಲು

ಮಹಾಂತೇಶ್‌ ಪಾಟೀಲ್ ಬಂಧನ ಮಾಡುವ ವೇಳೆ ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆ.  ನಮ್ಮ ಹಿಂದೆ ಕಾಂಗ್ರೆಸ್‌ ನಾಯಕರಿದ್ದಾರೆ. ಅರೆಸ್ಟ್‌ ಮಾಡುವ ಮುನ್ನ ಎಚ್ಚರ ಎಂದು ಸಿಐಡಿ ಪೊಲೀಸರಿಗೆ ಅವಾಜ್‌ ಹಾಕಿದ್ದಾರೆ. ಇದರಿಂದ ಆಕ್ರೋಶಗೊಂಡ ಡಿವೈಎಸ್‌ಪಿ ಶಂಕರಗೌಡ, ಆರೋಪಿ ಮಹಾಂತೇಶ್‌ ಪಾಟೀಲ್ ಕೊರಳ ಪಟ್ಟಿ ಹಿಡಿದು ಎಳೆದುಕೊಂಡು ಹೋಗಿದ್ದಾರೆ. ಕಲಬುರಗಿ ನಗರದ ಐವಾನ್ ಏ ಶಾಹಿ ಅತಿಥಿ ಗೃಹದಲ್ಲಿರುವ ಸಿಐಡಿ ಕಚೇರಿಗೆ ಮಹಾಂತೇಶ್‌ ಪಾಟೀಲ್‌ನನ್ನು ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.

ಮುಲಾಜಿಲ್ಲದೆ ಕ್ರಮ ಜರುಗಿಸಿ : ಈ ಕುರಿತಾಗಿ ಡಿ.ಕೆ. ಶಿವಕುಮಾರ ಪ್ರತಿಕ್ರಿಯೆ ನೀಡಿದ್ದು, ಯಾರೇ ಇರಬಹುದು ಅವರ ವಿತುದ್ಧ ಕ್ರಮಕೈಗೊಳ್ಳಿ. ಹಗರಣವನ್ನ ಬಯಲಿಗೆಳೆದಿದ್ದೆ ಕಾಂಗ್ರೆಸ್‌. ಪ್ರಿಯಾಂಕ ಖರ್ಗೆ ಅವರು ಮೊದಲು ಹಗರಣ ಕುರಿತು ಮಾತಾಡಿದ್ರು. 52 ಸಾವಿರ ಜನ ಪಿಎಸ್​ಐ ಪರೀಕ್ಷೆ ಬರೆದಿದ್ದಾರೆ. ಅವರಿಗೆ ಅನ್ಯಾಯವಾಗಲಿದೆ. ಪಿಎಸ್​ಐ ಪೊಸ್ಟ್​​ಗೆ 50 ರಿಂದ 60 ಲಕ್ಷ ಲಂಚ ಕೊಟ್ಟಿದ್ದಾರೆ ಎಂಬ ಮಾತುಗಳು ಕೇಳಿ ಬರ್ತಿವೆ. ಈ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿದೆ. ಎಲ್ಲಿ ನೋಡಿದ್ರು ಲಂಚ ಲಂಚ ಎಂದು ಹೇಳಿದರು.

545 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ವಿಚಾರಕ್ಕೆ ಸಂಬಂಧಿಸಿ ಬಗೆದಷ್ಟು ಪಿಎಸ್‌ಐ ಪರೀಕ್ಷಾ ಅಕ್ರಮಗಳು ಹೊರಬರುತ್ತಿವೆ.

Donate Janashakthi Media

Leave a Reply

Your email address will not be published. Required fields are marked *