ಬೆಳಗಾವಿ ಮೂಲದ ಮತ್ತೊಬ್ಬ ಗುತ್ತಿಗೆದಾರ ಲಾಡ್ಜ್‌ನಲ್ಲಿ ಆತ್ಮಹತ್ಯೆ

ಬಾಳೆಹೊನ್ನೂರು: ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್​ ಪಾಟೀಲ್​ ಉಡುಪಿ ಲಾಡ್ಜ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಸುವ ಮುನ್ನವೇ ಬೆಳಗಾವಿ ಜಿಲ್ಲೆಯ ಮತ್ತೊಬ್ಬ ಗುತ್ತಿಗೆದಾರ ಬಾಳೆಹೊನ್ನೂರು ಪಟ್ಟಣದ ಲಾಡ್ಜ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಳಗಾವಿ ಮೂಲದ ಬಸವರಾಜ್​(47) ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ. ಮೂರು ದಿನಗಳ ಹಿಂದೆ ಕೊಠಡಿ ಪಡೆದಿದ್ದ ಬಸವರಾಜ್​ ಬುಧವಾರ ಬೆಳಗ್ಗೆ ಕೊಠಡಿಯಿಂದ ಹೊರಬಂದಿದ್ದರು. ಬಳಿಕ ಕೊಠಡಿ ಒಳಗೆ ತೆರಳಿದವರು ಹೊರಗೆ ಬಂದಿರಲಿಲ್ಲ. ಬುಧವಾರ ಮಧ್ಯಾಹ್ನದವರೆಗೂ ಕೊಠಡಿ ಬಾಗಿಲು ತೆರೆಯದಿದ್ದರಿಂದ ಅನುಮಾನಗೊಂಡ ಲಾಡ್ಜ್​ ಸಿಬ್ಬಂದಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಪರಿಶೀಲಿಸಿದಾಗ ಕೊಠಡಿಯ ಫ್ಯಾನ್​ಗೆ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಬಸವರಾಜ್​ ಅವರ ಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಬೆಳಗಾವಿಯಿಂದ ಕುಟುಂಬಸ್ಥರು ಬಂದ ಬಳಿಕ ಆತ್ಮಹತ್ಯೆಯ ಕಾರಣ ತಿಳಿಯಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

40% ಕಮೀಷನ್‌ ಆರೋಪ ಮಾಡಿ  ಸಂತೋಷ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ವಿಪಕ್ಷ ಹಾಗೂ ಸಾರ್ವಜನಿಕರ ಒತ್ತಡಕ್ಕೆ ಮಣಿದು ಕೆಎಸ್‌ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.  ಈಗ ಬಸವರಾಜ್‌ ಆತ್ಮಹತ್ಯೆ 40% ಕಮೀಷನ್‌  ಆರೋಪದ ಗಂಭೀರತೆಯನ್ನು ಹೆಚ್ಚಿಸಿದೆ.  ಗ್ರಾಮೀಣಾಭಿವೃದ್ಧಿ ಇಲಾಖೆ ಗುತಿಗೆದಾರರಿಗೆ ಬಿಲ್‌ ಬಿಡುಗಡೆ ಮಾಡದೆ ಇದ್ದರೆ ಬಹಳಷ್ಟು ಜನ ಗುತ್ತಿಗೆದಾರರು ಸಂತೋಷ್‌ ಮತ್ತು ಬಸವರಾಜ ಮಾರ್ಗವನ್ನು ತುಳಿಯುವ ಅಪಾಯವಿದೆ. ಹಾಗಾಗಿ ಮುಂಬರುವ ಅನಾಹುತವನ್ನು ತಪ್ಪಿಸಲು ಗುತ್ತಿಗೆದಾರರ ಕಾಮಗಾರಿ ಹಣ. ಹಾಗೂ 40% ಕಮೀಷನ್‌ ಆರೋಪವನ್ನು ಶೀಘ್ರವಾಗಿ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲು ಮುಂದಾಗಬೇಕಿದೆ.

Donate Janashakthi Media

Leave a Reply

Your email address will not be published. Required fields are marked *