ರಾಷ್ಟ್ರಧ್ವಜ ರಕ್ಷಣಾ ಅಭಿಯಾನ: ಯೂತ್ ಕಾಂಗ್ರೆಸ್‌ನಿಂದ ಜಗದೀಶ್ ಶೆಟ್ಟರ್‌ಗೆ ಧ್ವಜ ಕಾಣಿಕೆ

ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರಾಷ್ಟ್ರಧ್ವಜ ನೀತಿ ಸಂಹಿತೆ ತಿದ್ದುಪಡಿಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು, ರಾಷ್ಟ್ರಧ್ವಜ ರಕ್ಷಣಾ ಅಭಿಯಾನ ಕಾರ್ಯಕ್ರಮವನ್ನು ಯೂತ್ ಕಾಂಗ್ರೆಸ್ ಹಮ್ಮಿಕೊಂಡಿದೆ. ಇದರ ಭಾಗವಾಗಿ ಅಭಿಯಾನಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಸಚಿವ ಜಗದೀಶ್ ಶೆಟ್ಟರ್‌ಗೆ ರಾಷ್ಟ್ರಧ್ವಜ ಕಾಣಿಕೆ ನೀಡುವ ಮೂಲಕ ವಿಭಿನ್ನವಾಗಿ ಚಾಲನೆ ನೀಡಿದರು.

ವಿದ್ಯಾನಗರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಹುಬ್ಬಳ್ಳಿಯಲ್ಲಿರುವ ಜಗದೀಶ್‌ ಶೆಟ್ಟರ್ ಮನೆಗೆ ತೆರಳಿ ತ್ರಿವರ್ಣ ಧ್ವಜವನ್ನು ಕಾಣಿಕೆ ನೀಡಿ, ಖಾದಿಯಿಂದ ತಯಾರಿಸಿದ ಧ್ವಜವನ್ನೇ ಮನೆಯ ಮೇಲೆ ಹಾರಿಸುವಂತೆ ಮನವಿ ಮಾಡಿದರು.

ಹೊಸ ತಿದ್ದುಪಡಿಯಲ್ಲಿ ಪಾಲಿಸ್ಟರ್ ಬಟ್ಟೆಯ ಧ್ವಜಗಳಿಗೆ ಮತ್ತು ಯಂತ್ರದಿಂದ ತಯಾರಿಸಿದ ರಾಷ್ಟ್ರಧ್ವಜಗಳಿಗೂ ಅವಕಾಶ ನೀಡಿರುವ ಹಿನ್ನೆಲೆ, ಈ ನೀತಿಗೆ ವಿರೋಧಿಸಿ ಕಾಂಗ್ರೆಸ್ ಅಭಿಯಾನ ಆರಂಭಿಸಿದೆ. ಇತ್ತಿಚೇಗೆ ರಾಜ್ಯಕ್ಕೆ ಆಗಮಿಸಿದ್ದಾಗ ಖಾದಿ ಗ್ರಾಮೋದ್ಯೋಗಕ್ಕೆ ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಭೇಟಿ ನೀಡಿದ್ದರು.

Donate Janashakthi Media

Leave a Reply

Your email address will not be published. Required fields are marked *