ಈದ್ಗಾ ಮೈದಾನದ ಗೋಡೆ ಕೆಡವುದಾಗಿ ವಿವಾದಾತ್ಮಕ ಹೇಳಿಕೆ: ಸನಾತನ ಸಂಘಟನೆ ಕಾರ್ಯಕರ್ತನ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಚಾಮರಾಜಪೇಟೆಯ ಈದ್ಗಾ ಮೈದಾನಕ್ಕೆ ಸಂಬಂಧಿಸಿ ವಿಶ್ವ ಸನಾತನ ಪರಿಷತ್ ಅಧ್ಯಕ್ಷ ಭಾಸ್ಕರನ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಆತನ ವಿರುದ್ಧ ಚಾಮರಾಜಪೇಟೆ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಗಣೇಶೋತ್ಸವ ಆಚರಣೆ ಸಮೀಪಿಸುತ್ತಿದ್ದು, ಇದೀಗ ಈದ್ಗಾ ಮೈದಾನ ವಿವಾದದ ಕೇಂದ್ರ ಬಿಂದುವಾಗಿದೆ. ಬಾಬ್ರಿ ಮಸೀದಿ ರೀತಿ ಈದ್ಗಾ ಮೈದಾನದಲ್ಲಿನ ಗೋಡೆ ಕೆಡವುದಾಗಿ ಹೇಳಿಕೆ ಹಿಂದೂ‌ ಕಾರ್ಯಕರ್ತ ಭಾಸ್ಕರನ್ ಹೇಳಿಕೆ ನೀಡಿರುವುರು ಭಾರೀ ವಿವಾದಕ್ಕೆ ಕಾರಣವಾಗಿದೆ.

ಕಳೆದ ಒಂದು ವರ್ಷದಿಂದ ಈದ್ಗಾ ಮೈದಾನದ ವಾರಸುದಾರಿಕೆ ಯಾರದ್ದು ಎಂಬ ವಿಚಾರ ಭಾರೀ ಚರ್ಚೆಯಲ್ಲಿದ್ದು, ಹಿಂದುತ್ವ ಸಂಘಟನೆ, ಬಿಬಿಎಂಪಿ ಹಾಗೂ ಮುಸ್ಲಿಂ ವಕ್ಫ್ ಬೋರ್ಡ್ ನಡುವೆ ಸಂಘರ್ಷ ನಡೆಯುತ್ತಿದೆ.

ಸದ್ಯಕ್ಕೆ ಈದ್ಗಾ ಮೈದಾನ ಕಂದಾಯ ಇಲಾಖೆ ಸ್ವತ್ತಾಗಿದೆ. ವಿವಾದಾತ್ಮಕ ಹೇಳಿಕೆ ನೀಡಿರುವ ಭಾಸ್ಕರನ್ ಈದ್ಗಾ ಮೈದಾನವನ್ನ ಎಲ್ಲರೂ ಆಟದ ಮೈದಾನವಾಗಿ ಬಳಸಿಕೊಳ್ಳಬೇಕು. ಡಿಸೆಂಬರ್ 6 ರೊಳಗೆ ಮೈದಾನದ ಗೋಡೆ ಕೆಡವಬೇಕೆಂದು ಸರ್ಕಾರಕ್ಕೆ ಗಡುವು ನೀಡುತ್ತಿದ್ದೇವೆ. ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿಸಲು ತಯಾರಿ ನಡೆಸಿದ್ದೇವೆ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ, ಮಹಾರಾಷ್ಟ್ರದ ಹಿಂದೂಪರ ಸಂಘಟನೆಗಳ ಜೊತೆ ಸಂಪರ್ಕದಲ್ಲಿದ್ದೇವೆ’ ಎಂದು ಹೇಳಿದ್ದಾರೆ.

ಭಾಸ್ಕರನ್ ಹೇಳಿಕೆಯಿಂದ ಕೋಮು ಸೌಹರ್ಧತೆಗೆ ಧಕ್ಕೆಯಾಗಲಿದೆ. ಅನ್ಯ ಧರ್ಮೀಯರು ಪೂಜೆ ಮಾಡುವ ಜಾಗದ ಬಗ್ಗೆ ಅವಮಾನ ಮಾಡಿದ್ದಾರೆ. ಸಮಾಜದ ಸ್ವಾಸ್ಥ್ಯ ಹಾಳು ಮಾಡುವಂತ ಹೇಳಿಕೆ ನೀಡಿದ್ದಾರೆ. ಅಲ್ಲದೇ ಡಿಸೆಂಬರ್ 6 ಕಡೆ ದಿನ ಎಂದಿದ್ದಾರೆ. ಈದ್ಗಾ ಮೈದಾನ ಗೋಡೆ ನೆಲಸಮ ಆಗುವುದು ಖಚಿತ ಎಂದು ಭಾಸ್ಕರನ್ ಹೇಳಿಕೆ ನೀಡಿದ್ದಾರೆ ಎಂದು ಪಿಎಸ್ಐ ನಾಗೇಂದ್ರ ದೂರು ದಾಖಲಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *