ಭೀಕರ ಅಪಘಾತ 9 ಮಂದಿ ಸಾವು

ತುಮಕೂರು : ರಾಜ್ಯದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ತುಮಕೂರಿನಲ್ಲಿ ಕ್ರೂಸರ್ ಗೆ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಕ್ರೂಸರ್ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ. ಮೃತರು ರಾಯಚೂರು ಜಿಲ್ಲೆಯವರಾಗಿದ್ದು, ಕ್ರೂಸರ್ ನಲ್ಲಿ 20 ಮಂದಿ ಇದ್ದರೆಂದು ಮಾಹಿತಿ ಲಭ್ಯವಾಗಿದೆ.

ಕ್ರೂಸರ್ ಓವರ್ ಟೇಕ್ ಮಾಡಲು ಹೋಗಿ ಲಾರಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ 9 ಜನರು ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮೃತರೆಲ್ಲರೂ ಕೂಲಿ ಕಾರ್ಮಿಕರಾಗಿದ್ದಾರೆ. ರಾಯಚೂರು ಜಿಲ್ಲೆಯ ವಿವಿಧೆಡೆಗಳಿಂದ ಬೆಂಗಳೂರಿಗೆ ಹೋಗುವಾಗ ಅಪಘಾತ ಸಂಭವಿಸಿದೆ.ಸಿಂಧನೂರು, ಲಿಂಗಸೂರು, ದೇವದುರ್ಗದ ನಿವಾಸಿಗಳು ಎಂದು ತಿಳಿದು ಬಂದಿದೆ. ಮೂವರು ಮಹಿಳೆಯರು, ನಾಲ್ಕು ಮಂದಿ ಪುರುಷರು ಮತ್ತು ಇಬ್ಬರು ಮಕ್ಕಳು ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *