ಮರುಘಾ ಸ್ವಾಮೀಜಿ ಬಂಧನಕ್ಕೆ ಆಗ್ರಹಿಸಿ ಸೆ.2ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಂದನಕ್ಕೆ ಆಗ್ರಹಿಸಿ ಜನಪರ ಸಂಘಟನೆಗಳು ಬೃಹತ್ ಪ್ರತಿಭಟನೆಗೆ ಮುಂದಾಗಿವೆ. ಇದೇ ಸೆ.2ರಂದು ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯಲಿದೆ.

ಸೆಪ್ಟೆಂಬರ್‌ 2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ನಡೆಯಲಿದೆ. ಅದೇ ಹೊತ್ತಿಗೆ ರಾಜ್ಯದ ವಿವಿಧ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆಗಳು ನಡೆಯಲಿವೆ ಎಂದು ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.

ವಿವಿಧ ನಾಗರಿಕ ಸಂಘಟನೆಗಳು, ಸಾಹಿತ್ಯ ಸಾಂಸ್ಕೃತಿಕ ವಲಯದ ವ್ಯಕ್ತಿಗಳು, ದಲಿತ ಸಂಘಟನೆಗಳು, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳು,  ಕಾರ್ಮಿಕ ಸಂಘಟನೆಗಳು, ರೈತ ಮತ್ತು ಕೃಷಿಕೂಲಿಕಾರರ ಸಂಘಟನೆಗಳು, ಅಲ್ಪಸಂಖ್ಯಾತರ ಸಂಘಟನೆಗಳು ನೌಕರರ ಸಂಘಟನೆಗಳು, ಸ್ವಯಂಸೇವಾ ಸಂಸ್ಥೆಗಳು ವಕೀಲರ ಸಂಘಟನೆಗಳು, ಲೈಂಗಿಕ ಅಲ್ಪಸಂಖ್ಯಾತರು, ವಿವಿಧ ಗುಂಪುಗಳು ಮತ್ತು ಜೀವಪರ ವ್ಯಕ್ತಿಗಳ ಜಂಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

 

Donate Janashakthi Media

Leave a Reply

Your email address will not be published. Required fields are marked *