ನಿನ್ಯಾವ ಸೀಮೆ ಎಂಎಲ್‌ಸಿ ಎಂದು ʻರವಿಕುಮಾರ್‌ಗೆʼ ಕ್ಲಾಸ್

ಕೋಲಾರ : ವಿಧಾನಪರಿಷತ್‌ ಸದಸ್ಯ ರವಿಕುಮಾರ್‌ ಪ್ರಯಾಣಿಸುತ್ತಿದ್ದ ಕಾರು ಬೈಕ್‌ಗೆ ಢಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಅವರನ್ನು ಸ್ಥಳೀಯರು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಲಕ್ಷ್ಮೀಸಾಗರ ಗೇಟ್‌ ಬಳಿ ನಡೆದಿದೆ.

ಕೋಲಾರಕ್ಕೆ ಆಗಮಿಸುತ್ತಿದ್ದ ವೇಳೆ ಎಂಎಲ್‌ಸಿ ರವಿಕುಮಾರ್‌ ಅವರಿದ್ದ ಕಾರು ಹಿಂಬದಿಯಿಂದ ಬೈಕ್‌ಗೆ ಗುದ್ದಿದ ಪರಿಣಾಮ ಬೈಕ್‌ ಸವಾರ ಹೊಸಕೋಟೆ ತಾಲೂಕಿನ ಶಿವನಾಪುರ ಗ್ರಾಮದ ಗೋಪಾಲ್‌ ಎಂಬುವರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತವಾದರೂ ಕಾರಿನಿಂದ ಕೆಳಗಿಳಿಯದೆ ಶಾಸಕರು ದರ್ಪ ತೋರಿದ್ದಾರೆಂದು ಆರೋಪಿಸಿದ ಸ್ಥಳೀಯರು, ರವಿ ಕುಮಾರ್‌ ಅವರನ್ನು ತರಾಟೆಗೆ ತೆಗೆದುಕೊಂಡು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ವೇಮಗಲ್‌ ಪೊಲೀಸರು ಭೇಟಿ ನೀಡಿ, ಪರಿಸ್ಥಿತಿ ತಿಳಿಗೊಳಿಸಿದ್ದು, ಗಾಯಗೊಂಡ ಬೈಕ್‌ ಸವಾರನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

ನೀವು ಯಾವ ಸೀಮೆ ಎಂಎಲ್​ಸಿ? : ರವಿಕುಮಾರ್ ಕಾರ್​ನಿಂದ ಕೆಳಗೆ ಇಳಿಯುತ್ತಿದ್ದಂತೆ ಅವರನ್ನು ಸುತ್ತವರಿದ ಸಾರ್ವಜನಿಕರು ಕ್ಲಾಸ್ ತೆಗೆದುಕೊಂಡಿದ್ದಾರೆ. ನೀವು ಯಾವ ಸೀಮೆ, ಎಂಲ್​ಸಿ, ಮಾನವೀಯತೆ ಇಲ್ವಾ ಎಂದು ಬಾಯಿಗೆ ಬಂದಂತೆ ಬೈದಿದ್ದಾರೆ. ಈ ವೇಳೆ ಅವಾಚ್ಯ ಪದ ಸಹ ಬಳಕೆ ಮಾಡಿದ್ದಾರೆ. ಎಂಎಲ್​​ಸಿ ರವಿ ಕುಮಾರ್​ಗೆ ಛೀಮಾರಿ ಹಾಕಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ.

Donate Janashakthi Media

Leave a Reply

Your email address will not be published. Required fields are marked *