ಅರಕಲಗೂಡು ಜೆಡಿಎಸ್‌ ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಬಿಜೆಪಿ ಸೇರ್ಪಡೆ

ಬೆಂಗಳೂರು: ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಅವರು ಶನಿವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎ.ಟಿ ರಾಮಸ್ವಾಮಿ ಅವರನ್ನು ಕೇಂದ್ರ ಸಚಿವ ಅನುರಾಗ್ ಠಾಕೂರ್ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ಇದನ್ನೂ ಓದಿ : ರೌಡಿಶೀಟರ್ ಹೆಸರು ಕೈಬಿಡಲು ಲಂಚ ಅಧಿಕಾರಿ ವಿರುದ್ಧ ಶಾಸಕ ರಾಮಸ್ವಾಮಿ ಗಂಭೀರ ಆರೋಪ

ಎ.ಟಿ.ರಾಮಸ್ವಾಮಿ ಅವರು ಶಾಸಕ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದರು. ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಈ ಮೂಲಕ ಹಾಸನ ಜಿಲ್ಲೆಯಲ್ಲಿ ಜೆಡಿಎಸ್‌ಗೆ ದೊಡ್ಡ ಹೊಡೆತ ಬಿದ್ದಂತಾಗಿದೆ.

ಎ.ಟಿ ರಾಮಸ್ವಾಮಿ ಅವರು ಮಾಜಿ ಸಚಿವ ಎಚ್‌ಡಿ ರೇವಣ್ಣ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಜೆಡಿಎಸ್‌ ಪಕ್ಷದ ಕೆಲವು ವಿದ್ಯಮಾನಗಳಿಂದ ನೋವಾಗಿದೆ ಎಂದು ತಮ್ಮ ಅಸಮಾಧಾನವನ್ನು ತೋಡಿಕೊಂಡಿದ್ದರು. ಹಾಸನ ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಕ್ಷೀಣಿಸುತ್ತಿದೆ ಎಂದೂ ಹೇಳಿಕೊಂಡಿದ್ದರು. ಪಕ್ಷದ ಕೆಲವು ಸ್ಥಳೀಯ ನಿರ್ಧಾರಗಳ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು.

Donate Janashakthi Media

Leave a Reply

Your email address will not be published. Required fields are marked *