ಕಾಂಗ್ರೆಸ್‍ನಲ್ಲಿ ಭವಿಷ್ಯವಿದೆಯೆಂದು ಸವದಿ ಅಲ್ಲಿಗೆ ಹೋಗಿದ್ದಾರೆ : ಸಿಎಂ ಬೊಮ್ಮಾಯಿ

ಬೆಂಗಳೂರು : ನಮ್ಮ ಪಕ್ಷದ ಮುಖಂಡ ಹಾಗೂ ಆತ್ಮೀಯರೂ ಆಗಿದ್ದ ಲಕ್ಷ್ಮಣ್ ಸವದಿ ಬಿಜೆಪಿ ಬಿಟ್ಟು ಹೋಗುತ್ತಿರುವುದು ಮನಸ್ಸಿಗೆ ತುಂಬ ನೋವು ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೋವು ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಅವರನ್ನು ಉಳಿಸಿಕೊಳ್ಳಲು ನಾವು ಕೊನೆ ಕ್ಷಣದವರೆಗೂ ಎಲ್ಲ ಪ್ರಯತ್ನಗಳನ್ನು ನಡೆಸಿದವು. ಆದರೆ ಕಾಂಗ್ರೆಸ್‍ನಲ್ಲಿ ಭವಿಷ್ಯವಿದೆ ಎಂದು ಅಲ್ಲಿಗೆ ಹೋಗಿದ್ದಾರೆ. ಅವರು ಪಕ್ಷ ಬಿಡುತ್ತಿರುವುದು ವೈಯಕ್ತಿಕವಾಗಿ ನನಗೆ ತುಂಬ ನೋವು ತಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅವರು ಕಾಂಗ್ರೆಸ್ ಸೇರುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ನಿನ್ನೆಯೆ ಅವರು ರಾಜೀನಾಮೆ ಘೋಷಣೆ ಮಾಡಿದ್ದರು. ಇದರಲ್ಲಿ ನನಗೇನು? ವಿಶೇಷತೆ ಕಂಡಿಲ್ಲ ಎಂದರು. ನಾನು ಪಕ್ಷ ಬಿಡದಂತೆ ಅವರನ್ನು ಮನವೊಲಿಸುವ ಪ್ರಯತ್ನ ಮಾಡಿದೆ. ಜೊತೆಗೆ ಅನೇಕ ಮುಖಂಡರು ಸಹ ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಮನವಿ ಮಾಡಿದೆವು. ಅವರು ತೆಗೆದುಕೊಂಡ ನಿಲುವು ಸರಿಯಲ್ಲ ಎಂದರು.

ಇದನ್ನೂ ಓದಿಕೈ ನಾಯಕರ ಜೊತೆ ಲಕ್ಷ್ಮಣ ಸವದಿ ಮಾತುಕತೆ!

ಬಿಜೆಪಿ ಮೂರನೇ ಪಟ್ಟಿ ಅತಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಪಕ್ಷದ ವರಿಷ್ಠರು ಈಗಾಗಲೇ ಚರ್ಚಿಸಿ ಯಾರಿಗೆ, ಯಾವ ಕಡೆ ಟಿಕೆಟ್ ಕೊಡಬೇಕು ಎಂಬುದನ್ನು ತೀರ್ಮಾನಿಸಿದ್ದಾರೆ. ಅಕೃತವಾಗಿ ಬಿಡುಗಡೆಯಾಗುವುದು ಬಾಕಿ ಉಳಿದಿದೆ ಎಂದು ತಿಳಿಸಿದರು.

Donate Janashakthi Media

Leave a Reply

Your email address will not be published. Required fields are marked *