ಈ ಬಾರಿ ಜಗದೀಶ್‌ ಶೆಟ್ಟರ್‌ ಗೆಲ್ಲುತ್ತಾರೆ: ಬಿಜೆಪಿ ಸಂಸದೆ ಮಂಗಳ ಅಂಗಡಿ

ಬೆಳಗಾವಿ:  ಹುಬ್ಬಳ್ಳಿ ಧಾರವಾಡ ಸೆಂಟ್ರಲ್‌ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ಸಂಸದೆಯಾಗಿರುವ ಮಂಗಳ ಅಂಗಡಿ ಅವರು ಹೇಳಿದ್ದಾರೆ.

ಬುಧವಾರ ಹುಬ್ಬಳ್ಳಿಯ ವಿಶ್ವೇಶ್ವರಯ್ಯ ನಗರದ ಮತಗಟ್ಟೆ ಬಳಿ ಮತದಾನ ಮಾಡಿ ಮಾತನಾಡಿರುವ ಮಂಗಳ ಅಂಗಡಿ ಅವರು ಈ ಬಾರಿ ಜಗದೀಶ್‌ ಶೆಟ್ಟರ್‌ ಅವರು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಂಗಳಾ ಅಂಗಡಿಯವರ ಹೇಳಿಕೆ ಬಿಜೆಪಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ. ಅವರು ಸಂಸದರಾಗಿದ್ದುಕೊಂಡು ಈ ರೀತಿ ಹೇಳಿದ್ದು ಸರಿಯಲ್ಲ. ಕುಟುಂಬಕ್ಕಿಂತ ಪಕ್ಷ ಮುಖ್ಯ, ಅವರು ಶೆಟ್ಟರ್‌ ಬೀಗರಾಗಿರಬಹುದು ಆದರೆ ಬಿಜೆಪಿ ಸಂಸದರು, ಇವರ ಈ ಹೇಳಿಕೆ ವಿರುದ್ಧ ಹೈ ಕಮಾಂಡ್‌ಗೆ ದೂರು ನೀಡಲಾಗುವುದು ಎಂದು ಹೆಸರು ಹೇಳಲಿಚ್ಚಿಸಿದ ಬಿಜೆಪಿ ನಾಯಕರೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿಬಸವನ ಬಾಗೇವಾಡಿ: ಇವಿಎಂ, ವಿವಿಪ್ಯಾಟ್‌ ಯಂತ್ರಗಳನ್ನು ಎತ್ತಿ ಕುಕ್ಕಿದ ಜನ

ಮಂಗಳ ಅಂಗಡಿ ಅವರು ದಿವಂಗತ ರೈಲ್ವೆ ಸಚಿವರಾಗಿದ್ದ ಸುರೇಶ್‌ ಅಂಗಡಿ ಅವರ ಪತ್ನಿಯಾಗಿದ್ದಾರೆ. ಸದ್ಯ ಬಿಜೆಪಿಯ ಸಂಸದೆಯಾಗಿದ್ದಾರೆ. ಮಂಗಳ ಅಂಗಡಿ ಮಗಳು ಜಗದೀಶ್‌ ಶೆಟ್ಟರ್‌ ಮಗನ ಪತ್ನಿ. ಹೀಗಾಗಿ ಅವರದು ಬೀಗರ ಸಂಬಂಧ. ಬಿಜೆಪಿ ಬಿಟ್ಟು ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿರುವ ಜಗದೀಶ್‌ ಶೆಟ್ಟರ್‌ ಅವರನ್ನು ಸೋಲಿಸಲು ಬಿಜೆಪಿ ಇಲ್ಲಿ ರಣತಂತ್ರ ರೂಪಿಸಿದೆ. ಶೆಟ್ಟರ್‌ ವಿರುದ್ಧ ಬಿಜೆಪಿಯಿಂದ ಮಹೇಶ್‌ ಟೆಂಗಿನಕಾಯಿ ಸ್ಫರ್ಧೆ ಮಾಡುತ್ತಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *