ಜಿ 20 ಶೃಂಗಸಭೆ ಅನಾರೋಗ್ಯದಿಂದ ಔತಣಕೂಟಕ್ಕೆ ಹಾಜರಾಗುತ್ತಿಲ್ಲ: ಎಚ್‌.ಡಿ.ದೇವೇಗೌಡ

ಬೆಂಗಳೂರು: ಆರೋಗ್ಯ ಸಮಸ್ಯೆಯ ಕಾರಣದಿಂದ ದೆಹಲಿಯಲ್ಲಿ ಆಯೋಜನೆಗೊಂಡಿರುವ ಜಿ 20 ಶೃಂಗಸಭೆಯ ಔತಣಕೂಟದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಶುಕ್ರವಾರ ಹೇಳಿದ್ದಾರೆ.

ಇದನ್ನೂ ಓದಿ:ಅನಾರೋಗ್ಯದಿಂದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಕಲಾಪಕ್ಕೆ ಗೈರು

ಶುಕ್ರವಾರ ಸೆ-08 ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ ಅವರು, “ಆರೋಗ್ಯ ಕಾರಣಗಳಿಂದಾಗಿ ಭಾರತದ ರಾಷ್ಟ್ರಪತಿ ದೌಪದಿ ಮುಮುಂಜಿ ಅವರು ಆಯೋಜಿಸಿರುವ ಜಿ 20 ಔತಣಕೂಟದಲ್ಲಿ ನಾನು ಭಾಗವಹಿಸಲಾಗುತ್ತಿಲ್ಲ. ಈ ಬಗ್ಗೆ ಈಗಾಗಲೇ ಸರ್ಕಾರಕ್ಕೆ ತಿಳಿಸಿದ್ದೇನೆ. ಜಿ 20 ಶೃಂಗಸಭೆಯು ಯಶಸ್ವಿಯಾಗಲಿ ಎಂದು ನಾನು ಬಯಸುತ್ತೇನೆ” ಎಂದು ಬರೆದು ಪ್ರಧಾನಿ ಕಚೇರಿ ಮತ್ತು ರಾಷ್ಟ್ರಪತಿ ಭವನವನ್ನು ಟ್ಯಾಗ್ ಮಾಡಿದ್ದಾರೆ.

ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಎಚ್.ಡಿ.ದೇವೇಗೌಡ ಅವರಿಗೆ ಶನಿವಾರ ನಡೆಯಲಿರುವ ಜಿ 20 ಶೃಂಗಸಭೆಯ ಔತಣಕೂಟಕ್ಕೆ ಆಹ್ವಾನ ನೀಡಲಾಗಿತ್ತು.ರಾಷ್ಟ್ರಪತಿ ದೌಪದಿ ಮುರ್ಮು ಅವರ ಸಮ್ಮುಖದಲ್ಲಿ ಈ ಔತಣಕೂಟ ನಡೆಯಲಿದೆ. ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಔತಣಕೂಟಕ್ಕೆ ಆಹ್ವಾನಿಸಲಾಗಿದೆ. ಜಿ 20 ಶೃಂಗಸಭೆ

Donate Janashakthi Media

Leave a Reply

Your email address will not be published. Required fields are marked *