ಜಾತಿನಿಂದನೆ ಆರೋಪ: ಮನನೊಂದ ವ್ಯಕ್ತಿ ಆತ್ಮಹತ್ಯೆಗೆ ಶರಣು

ಕೋಲಾರ: ಮಹಿಳೆಯೊಬ್ಬರು ಪೊರಕೆಯಿಂದ ಹೊಡೆದು ಜಾತಿನಿಂದನೆ ಮಾಡಿದರು ಎಂಬ ಕಾರಣಕ್ಕೆ ಮನನೊಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.

ಈ ಘಟನೆ ಮಾಲೂರು ತಾಲೂಕಿನ ಹುರುಳಗೆರೆ ಗ್ರಾಮದಲ್ಲಿ ನಡೆದಿದ್ದು, ಶ್ರೀನಿವಾಸ್ (30) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಈ ಕುರಿತು ಮಾಲೂರು ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.

ಶ್ರೀನಿವಾಸ್ ಹಾಗೂ ಅಶೋಕ್ ಇಬ್ಬರೂ ಸ್ನೇಹಿತರಾಗಿದ್ದು, ದಿನಗೂಲಿ ಕಾರ್ಮಿಕರಾಗಿದ್ದಾರೆ.ಆಶೋಕ್ ತಮ್ಮ ಪತ್ನಿ ಮಂಜುಳಾ ಅವರ ಶೀಲ ಶಂಕಿಸಿದ್ದು, ಜಗಳ ಮಾಡಿದ್ದರು. ಇದರಿಂದ ಕುಪಿತಗೊಂಡಿದ್ದ ಮಂಜುಳಾ ಅವರು ಶ್ರೀನಿವಾಸ್ ಅವರ ಮನೆಗೆ ತೆರಳಿ ಪೊರಕೆ ಹಿಡಿದು ನಿಂದನೆ ಮಾಡಿದ್ದಾರೆ.ಇದರಿಂದ ಮನನೊಂದ ಶ್ರೀನಿವಾಸ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಜಾತಿನಿಂದನೆ

ಇದನ್ನೂ ಓದಿ:ಶಕ್ತಿ ಯೋಜನೆ | ಶತದಿನಗಳಲ್ಲಿ 62 ಕೋಟಿ ಮಹಿಳೆಯರು ಉಚಿತ ಪ್ರಯಾಣ!

ಈ ಕುರಿತು ಮೃತ ವ್ಯಕ್ತಿ ತಂದೆಯು ಜಾತಿ ನಿಂದನೆ ದೂರು ನೀಡಿದ್ದರು.ಅಶೋಕ್‌ ಹಾಗೂ ಅವರ ಪತ್ನಿ ಮಂಜುಳಾ ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಡಿಯೋ ನೋಡಿ:ಸೌಜನ್ಯ ಪ್ರಕರಣ : SIT ತನಿಖೆಗೆ ಆಗ್ರಹಿಸಿ ಆಗಸ್ಟ್ 28ಕ್ಕೆ ಚಲೋ ಬೆಳ್ತಂಗಡಿ Janashakthi Media

Donate Janashakthi Media

Leave a Reply

Your email address will not be published. Required fields are marked *