ಹಿಂದುಳಿದ ವರ್ಗಗಳಿಗೆ ಶೇ.33ರಷ್ಟು ಮೀಸಲಾತಿ| ಶಿಫಾರಸ್ಸಿಗೆ ರಾಜ್ಯ ಸಂಪುಟ ಅಸ್ತು!

ಬೆಂಗಳೂರು: ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದಂತೆ ಪಂಚಾಯತ್ ರಾಜ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಕ್ತ ಮೀಸಲಾತಿ ನೀಡುವ ಕುರಿತಂತೆ ಆಯೋಗ ಮಾಡಿರುವ 5 ಶಿಫಾರಸ್ಸಿನಲ್ಲಿ ಮೂರು ಶಿಫಾರಸ್ಸಿಗೆ ಒಪ್ಪಿಗೆ ನೀಡಲಾಗಿದೆ.

ಇದನ್ನೂ ಓದಿ:ಹಿಂದುಳಿದ ವರ್ಗಗಳ ಆಯೋಗ ವರದಿ ಸ್ವೀಕರಿಸಲು ಹಿಂದೇಟು ಹಾಕುತ್ತಿರುವ ಸರಕಾರ: ಸಿದ್ದರಾಮಯ್ಯ

ಒಟ್ಟಾರೆ ಶೇ. 50ರಷ್ಟು ಮೀಸಲಾತಿ ಮೀರದಂತೆ ಶೇ 33ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ. ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಮೀಸಲಾತಿ ಕೊಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಹೆಚ್‌.ಕೆ ಪಾಟೀಲ್ ಹೇಳಿದರು.

ಗುರುವಾರ ಅ-05 ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್‌.ಕೆ ಪಾಟೀಲ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಏಳು ವಿಷಯ ಪರಿಗಣಿಸಿದ್ದೇವೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಪ್ರಾತಿನಿಧ್ಯಕ್ಕೆ ಸಮಿತಿ ರಚಿಸಲಾಗಿತ್ತು. ನ್ಯಾ.ಡಾ.ಕೆ.ಭಕ್ತವತ್ಸಲ ಸಮಿತಿಯ 5 ಶಿಫಾರಸುಗಳ ಪೈಕಿ ಮೂರು ಶಿಫಾರಸ್ಸಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಸಿದ್ದಾರೆ.

ಇದನ್ನೂ ಓದಿ:ಕೆಲವರ ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆ ಇನ್ನೂ ಜೀವಂತ: ಸಿದ್ದರಾಮಯ್ಯ

ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ 25 ಕೋಟಿ ರೂಪಾಯಿ ವೆಚ್ಚದಲ್ಲಿ ಹಬ್ ಮತ್ತು ಸ್ಪೋಕ್ಸ್ ಮಾದರಿಯಲ್ಲಿ ಬ್ರೇನ್ ಹೆಲ್ತ್ ಇನಿಶಿಯೇಟಿವ್ ಪ್ರೊಗ್ರಾಂಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಬ್ರೇನ್ ಹೆಲ್ತ್ ಇನಿಶಿಯೇಟಿವ್ ಅಡಿಯಲ್ಲಿ ಮೆದುಳಿನ ಆರೋಗ್ಯ, ಆರೈಕೆ, ತಲೆನೋವು ಹಾಗೂ ಒತ್ತಡ ನಿರ್ವಹಣೆ ಸೇರಿ ಹಲವು ಕಾರ್ಯಕ್ರಮಗಳಿಗೆ ಬ್ರೇನ್ ಹೆಲ್ತ್ ಇನಿಶಿಯೇಟಿವ್ ಅನುವು ಮಾಡಿಕೊಡಲಿದೆ ಎಂದರು.

ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಚುನಾವಣೆ ನಿರ್ವಹಣೆ, ಆಡಳಿತ ಸುಧಾರಣಾ ಇಲಾಖಾ ವ್ಯಾಪ್ತಿಗೆ ತರುವ ಶಿಫಾರಸ್ಸನ್ನು ಇಂದು ಕ್ಯಾಬಿನೆಟ್ ಒಪ್ಪಿದ್ದು, ಈ ಹಿಂದೆ ಪಂಚಾಯತ್ ರಾಜ್ ಇಲಾಖೆ ಜೊತೆಗೆ ಚುನಾವಣಾ ಆಯೋಗ ಸಮನ್ವಯ ಸಾಧಿಸುತ್ತಿತ್ತು. ಇದೀಗ ಆಡಳಿತ ಸುಧಾರಣಾ ಇಲಾಖೆ ಅಡಿಯಲ್ಲಿ ನಿರ್ವಹಣೆ ಮಾಡಲಾಗುವುದು. ರಾಜ್ಯ ಮುಖ್ಯ ಚುನಾವಣಾ ಆಯೋಗ ಕೂಡ ಇನ್ನುಮುಂದೆ ಆಡಳಿತ ಸುಧಾರಣಾ ಇಲಾಖೆ ಜೊತೆಗೆ ಚರ್ಚೆ ಮಾಡಬೇಕು ಎಂದು ತಿಳಿಸಿದ್ದಾರೆ.

ವಿಡಿಯೋ ನೋಡಿ:ಮಹಿಳಾ ಮೀಸಲಾತಿ ಲೆಕ್ಕಾಚಾರ ಏನು? ಎತ್ತ? ಕೆ.ಎಸ್.‌ ವಿಮಲಾ ಜೊತೆ ಮಾತುಕತೆ #womensreservationbill

Donate Janashakthi Media

Leave a Reply

Your email address will not be published. Required fields are marked *