ಮಂಡ್ಯ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡಿದ್ದ 55 ವರ್ಷದ ರೈತ ಬೆಂಗಳೂರಿನ ಆಸ್ಪತ್ರೆಯಲ್ಲಿ ನವೆಂಬರ್ 4ರಂದು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಆರ್ ಪೇಟೆ ತಾಲ್ಲೂಕಿನ ಮೂಡನಹಳ್ಳಿಯ ರೈತ ಎಂ. ಡಿ ಮಂಜೇಗೌಡ ಅವರು ಹಲವಾರು ವರ್ಷಗಳಿಂದ ಭೂಸ್ವಾಧೀನ ಪ್ರಕರಣದಲ್ಲಿ ಪರಿಹಾರವನ್ನು ಪಡೆಯದ ಕಾರಣ ಮತ್ತು ಪರ್ಯಾಯ ಭೂಮಿಯನ್ನು ನೀಡದ ಕಾರಣ ನೊಂದು ಬೆಂಕಿ ಹಚ್ಚಿಕೊಂಡಿದ್ದರು ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ: ದ್ವೇಷ ಭಾಷಣ ಪ್ರಕರಣ: ಕಲ್ಲಡ್ಕ ಪ್ರಭಾಕರ ಭಟ್ ಜಾಮೀನು ಅರ್ಜಿ ಮುಂದೂಡಿಕೆ
ಪೊಲೀಸರ ಪ್ರಕಾರ, ಜಿಲ್ಲಾಧಿಕಾರಿ ಕಚೇರಿ ಎದುರಿನ ಕಾವೇರಿ ಪಾರ್ಕ್ನಲ್ಲಿ ಅವರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳೀಯ ಜನರು ಆತನ ರಕ್ಷಣೆಗೆ ಧಾವಿಸಿ ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (MIMS) ಕರೆದೊಯ್ದಿದ್ದಾರೆ.
ಶೇ 60ಕ್ಕೂ ಹೆಚ್ಚು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಬುಧವಾರ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಅವರ ಕುಟುಂಬದಿಂದ ಇದುವರೆಗೆ ಯಾವುದೇ ದೂರು ಬಂದಿಲ್ಲ. ದೂರು ಸ್ವೀಕರಿಸಿದ ನಂತರ, ನಾವು ಆರೋಪಗಳ ಕುರಿತು ಪರಿಶೀಲಿಸುತ್ತೇವೆ ಮತ್ತು ಅಗತ್ಯ ತನಿಖೆಯನ್ನು ಪ್ರಾರಂಭಿಸುತ್ತೇವೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ನೋಡಿ: ನಿರಂಜನರ ಕಥನ ಸಾಹಿತ್ಯದಲ್ಲಿ ಮಹಿಳೆ – ಡಾ ಎನ್. ಗಾಯತ್ರಿ Janashakthi Media
