ಬೆಂಗಳೂರು: ಜೂನ್ 12 ಗುರುವಾರದಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ಗೊಂದಲದ ಹಿನ್ನೆಲೆಯಲ್ಲಿ ಸಾಮಾಜಿಕ ಶೈಕ್ಷಣಿಕವಾಗಿ ಹೊಸ ಸಮೀಕ್ಷೆಯನ್ನು ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಜಾತಿ
ಸಚಿವ ಸಂಪುಟ ಸಭೆಯ ಬಳಿಕ ಜಂಟಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದೆಹಲಿಯಲ್ಲಿ ಹೈಕಮಾಂಡ್ ನಾಯಕರು ವರದಿಯ ದತ್ತಾಂಶಕ್ಕೆ ಹತ್ತು ವರ್ಷ ಅವಧಿ ಆಗಿದೆ. ಹತ್ತು ವರ್ಷಗಳ ನಂತರದಲ್ಲಿ ಅನೇಕ ಬದಲಾವಣೆ ಆಗಿವೆ ಎಂದು ಸಲಹೆ ಕೊಟ್ಟಿದ್ದರು ಎಂದು ವಿವರಿಸಿದರು.
ಜಾತಿಗಣತಿ ಮರುಸಮೀಕ್ಷೆ
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ತಿದ್ದುಪಡಿ ವಿಧೇಯಕದ ಸೆಕ್ಷನ್ 11/1 ಅಡಿಯಲ್ಲಿ ಮತ್ತೆ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯನ್ನು ಕಾನೂನು ಮೂಲಕ ಮಾಡಬೇಕಾಗುತ್ತದೆ ಎಂದಿದೆ. ಹಾಗಾಗಿ ಸಾಮಾಜಿಕ ಹಾಗೂ ಶೈಕ್ಷಣಿಕ ಮರು ಸಮೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಇದನ್ನೂ ಓದಿ: ಬಣ್ಣ ಬದಲಿಸಿದ ನಮ್ಮ ಮೆಟ್ರೋ ರೈಲುಗಳು; ಬಿಎಂಟಿಸಿ ಬಸ್ ಮಾದರಿಯಲ್ಲಿಯೇ ಮೈತುಂಬಾ ಜಾಹೀರಾತು
ಸಚಿವ ಸಂಪುಟ ಸಭೆಯಲ್ಲಿ ಶಾಶ್ವತ ಹಿಂದುಳಿದ ಆಯೋಗ ಕೊಟ್ಟಿರುವ ವರದಿ ಹಿನ್ನೆಲೆಯಲ್ಲಿ ಸಭೆ ನಡೆಸಲಾಗಿದೆ. ಕೇವಲ ಇದೊಂದೇ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಆಗಿದೆ. 54 ಮಾನದಂಡಗಳನ್ನು ಇಟ್ಟುಕೊಂಡು ಮನೆ ಮನೆಗೆ ತೆರಳಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷಾ ವರದಿ ಸಿದ್ದಪಡಿಸಲಾಗಿತ್ತು. 2011 ರ ಜನಗಣತಿ ಪ್ರಕಾರ ಕರ್ನಾಟಕದಲ್ಲಿ 6.11 ಕೋಟಿ ಜನಸಂಖ್ಯೆ ಇತ್ತು. 2015 ರ ವೇಳೆ 6.35 ಕೋಟಿ ಅಂದಾಜು ಮಾಡಲಾಗಿದೆ ಎಂದು ವಿವರಿಸಿದರು.
ಇದರಲ್ಲಿ 5.98 ಕೋಟಿ ಜನರನ್ನು ಸಮೀಕ್ಷೆ ಮಾಡಲಾಗಿದೆ. 1,60,000 ಸಿಬ್ಬಂದಿ ಈ ಸಮೀಕ್ಷೆಯಲ್ಲಿ ಭಾಗಿಯಾಗಿದ್ದರು. 2013 ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ವರದಿ ಮತ್ತು ಶಿಫಾರಸು ಅಂತಿಮಗೊಂಡಿರಲಿಲ್ಲ. 2018 ರಲ್ಲಿ ಕಾಂಗ್ರೆಸ್ ಸೋಲು ಕಂಡಿತ್ತು. ಸಮ್ಮಿಶ್ರ ಸರ್ಕಾರ ರಚನೆ ಆದ ಸಂದರ್ಭದಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ಹಿಂದುಳಿದ ವರ್ಗಗಳ ಸಚಿವರಾಗಿದ್ದ ಪುಟ್ಟ ರಂಗ ಶೆಟ್ಟಿ ಅವರಿಗೆ ಕಾಂತರಾಜು ಹಾಗೂ ಸದಸ್ಯರು ವರದಿ ಸ್ವೀಕಾರ ಮಾಡುವಂತೆ ಮನವಿ ಮಾಡಿದ್ದರು. ಆದರೆ ಕುಮಾರಸ್ವಾಮಿ ಅವರು ಇದಕ್ಕೆ ವಿರೋಧ ಮಾಡಿದ್ದರಿಂದ ವರದಿ ಸ್ವೀಕರಿಸಲಿಲ್ಲ ಎಂದರು.
ಕಾಂತರಾಜು ಅವಧಿ ಮುಗಿದ ಬಳಿಕ ಜಯಪ್ರಕಾಶ್ ಹೆಗ್ಡೆ ಅವರನ್ನು ಅಧ್ಯಕ್ಷರನ್ನಾಗಿ ಬಿಜೆಪಿ ಸರ್ಕಾರ ನೇಮಕ ಮಾಡಿತ್ತು. ಕಾಂತರಾಜು ಆಯೋಗದ ದತ್ತಾಂಶ ಪಡೆದುಕೊಂಡು ಹೆಗ್ಡೆ ಶಿಫಾರಸು ಮಾಡಿದ್ದರು ಹಾಗೂ ಸರ್ಕಾರಕ್ಕೆ 29 -2- 2024 ರಂದು ವರದಿ ಸಲ್ಲಿಕೆ ಮಾಡಿದ್ದರು ಎಂದು ತಿಳಿಸಿದರು.
ಲೋಕಸಭಾ ಚುನಾವಣಾ ಕಾರಣಕ್ಕಾಗಿ ವರದಿ ಚರ್ಚೆ ಸಾಧ್ಯ ಆಗಿರಲಿಲ್ಲ. 2025 ರಲ್ಲಿ ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿದ್ದೆವು. ಸಚಿವರು ಸಂಪುಟದಲ್ಲಿ ತಮ್ಮ ಅಭಿಪ್ರಾಯ ನೀಡಿದ್ದಾರೆ. ಇಂದಿನ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಅಂತಿಮವಾಗಿ ಚರ್ಚೆ ನಡೆಸಲಾಗಿದೆ ಎಂದರು.
ಇದನ್ನೂ ನೋಡಿ: ಚರ್ಚೆ | ತ್ಯಾಗದ ಹಬ್ಬ ಬಕ್ರೀದ್- ಆಹಾರ ರಾಜಕಾರಣ – ಸೈಯದ್ ಶಫಿವುಲ್ಲಾ ಮತ್ತು ಕೆ ಎಸ್ ವಿಮಲಾ ಮಾತುಕತೆJanashakthi