ಬಾಗಿಲ ಬಳಿ ನಿಲ್ಲಬೇಡ ಎಂದಿದ್ದಕ್ಕೆ ಬಸ್‌ ಕಂಡಕ್ಟರ್‌ಗೆ ಚಾಕುವಿನಿಂದ ಇರಿದ ಪ್ರಯಾಣಿಕ

ಬೆಂಗಳೂರು: ನಿನ್ನೆ ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ, ವೋಲ್ವೊ ಬಸ್‌  ಕಂಡಕ್ಟರ್‌ ಪ್ರಯಾಣಿಕನಿಗೆ ಬಾಗಿಲ ಬಳಿ ನಿಲ್ಲಬೇಡ ಎಂದಿದ್ದಾರೆ. ಇದಕ್ಕೆ ಸಿಟ್ಟಾದ ಪ್ರಯಾಣಿಕ ತನ್ನ ಬಳಿ ಇದ್ದ ಚಾಕುವನ್ನು ತೆಗೆದು ಏಕಾಏಕಿ ಕಂಡಕ್ಟರ್‌ಗೆ ಚುಚ್ಚಿದ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್‌ನಲ್ಲಿ ನಡೆದಿದೆ. ಬಾಗಿಲ

ವೈಟ್ ಫೀಲ್ಡ್ ಬಳಿ ಬಸ್ ಕಂಡಕ್ಟರ್‌ಗೆ ಪ್ರಯಾಣಿಕನಿಂದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಜಾರ್ಖಂಡ್ ಮೂಲದ ಹರ್ಷ್ ಸಿನ್ಹಾ ಚಾಕು ಇರಿದಿರುವ ಆರೋಪಿ ಆಗಿದ್ದಾನೆ. ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್‌ ಚಾಕು ಇರಿತಕ್ಕೆ ಒಳಗಾದವರು.

ಇದನ್ನೂ ಓದು: ಪಂಚಾಯಿತಿ ನೌಕರರ ಸಂಘ ‘ಸಚಿವರ ಮನೆ ಚಲೋ’ ಪ್ರತಿಭಟನಾ ಮೆರವಣಿಗೆ

ಎರಡ್ಮೂರು ಬಾರಿ ಚಾಕು ಇರಿದು, ನಂತರ ಬಸ್‌ನಲ್ಲಿದ್ದ ಸುತ್ತಿಗೆಯಿಂದ ಬಸ್ ಗಾಜುಗಳನ್ನು ಪುಡಿ ಮಾಡಿದ್ದಾನೆ. ಬಸ್ ಡೋರ್ ಅನ್ನು ಕಾಲಿನಿಂದ ಗುದ್ದಿ ಹುಚ್ಚನಂತೆ ವರ್ತಿಸಿದ್ದಾನೆ.

ವೈಟ್‌ಫೀಲ್ಡ್ ಪೊಲೀಸ್ ಠಾಣೆ ಪೊಲೀಸರು ಆರೋಪಿ ಹರ್ಷ ಸಿನ್ಹಾನನ್ನು ಬಂಧಿಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ನೋಡಿ: ಸಾಹಿತ್ಯ ಮತ್ತು ಸೌಹಾರ್ದತೆ – ಡಾ. ನಾಗಭೂಷಣ್‌ ಬಗ್ಗನಡುJanashakthi Media

Donate Janashakthi Media

Leave a Reply

Your email address will not be published. Required fields are marked *