ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಬಿದ್ದ ಖಾಸಗಿ ಬಸ್, ನಾಲ್ವರ ಸಾವು

ಹಾರಾಷ್ಟ್ರ: ಅಮರಾವತಿಯ ಮೆಲ್‌ಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಸೇತುವೆ ಮೇಲಿಂದ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ. ಈ ಘಟನೆಯಲ್ಲಿ ಬಸ್‌ನಲ್ಲಿದ್ದ ಸುಮಾರು 30 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಚಾಲಕ

ಗಾಯಗೊಂಡ ಎಲ್ಲಾ ಪ್ರಯಾಣಿಕರನ್ನು ಸೇಮದೋಹ್‌ನ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ನದಿಗೆ ಬಿದ್ದ ಅಪಘಾತದ ಬಸ್‌ನ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸುವ ಪ್ರಯತ್ನ ನಡೆದಿದೆ. ಅಪಘಾತದ ಬಗ್ಗೆ ಪರತವಾಡ, ಚಿಕಲದಾರ ಹಾಗೂ ಧರಣಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ರಕ್ಷಣಾ ತಂಡಗಳು ಅಪಘಾತ ಸ್ಥಳಕ್ಕೆ ಧಾವಿಸಿದೆ.

ಇದನ್ನೂ ಓದಿ: ಅಂಗನವಾಡಿ ಮೇಲ್ಛಾವಣಿ ಕುಸಿತ; 4 ಮಕ್ಕಳಿಗೆ ಗಾಯ

ಈ ರಸ್ತೆಯಲ್ಲಿ ಇಂತಹ ಘಟನೆಗಳು ಆಗಾಗ ನಡೆಯುತ್ತಿರುತ್ತವೆ. ಸರಕಾರವು ರಸ್ತೆಯಲ್ಲಿ ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆಯಿದೆ. ಪ್ರಯಾಣಿಕರಿಗೆ ಸೂಕ್ತ ಮಾಹಿತಿ ಫಲಕಗಳು ಹಾಗೂ ರಸ್ತೆಗಳ ವ್ಯವಸ್ಥಿತ ನಿರ್ವಹಣೆ ಅಗತ್ಯ ಇದೆ ಎಂದು ಸ್ಥಳೀಯರು ಹೇಳಿದ್ದಾರೆ.

ಇದನ್ನೂ ನೊಡಿ: ಪಿಚ್ಚರ್ ಪಯಣ – 150 | ನಾಜಿ, ಫ್ಯಾಸಿ ಕಾಲಘಟ್ಟದಲ್ಲಿ ಪ್ರೊಪಗ್ಯಾಂಡ ಸಿನೆಮಾ – ಕೆ.ಫಣಿರಾಜ್ ಮುರಳಿ ಕೃಷ್ಣ ಮಾತುಕತೆ

Donate Janashakthi Media

Leave a Reply

Your email address will not be published. Required fields are marked *