ರಾಮನಗರದ ರಾಮದೇವರ ಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ರಾಮನಗರ: ರಾಮದೇವರ ಬೆಟ್ಟದಿಂದ ಜಿಗಿದು ವಿದ್ಯಾರ್ಥಿನಿಯೊಬ್ಬರು ಬುಧುವಾರ ಆತ್ಮಹತ್ಯೆಗೆ ಯತ್ನಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ಬೆಮೆಲ್‌ ಲೇಜೌಟ್‌ನ ಇಶಾ ಆತ್ಮಹತ್ಯೆಗೆ ಯತ್ನಿಸಿದ್ದು, ಸಣ್ಣಪುಟ್ಟ ಗಾಯವಾಗಿದ್ದು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಬಳಿಕ ಬೆಂಗಳೂರಿನ ವಿಕ್ರಮ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಬೆಂಗಳೂರಿನ ಕೈಸ್ಟ್‌ ಕಾಲೇಜಿನಲ್ಲಿ ಪದವಿ ಓದುತ್ತಿರುವ ಇಶಾ, ಪರೀಕ್ಷೆ ಭಯದಿಂದಾಗಿ ಖಿನ್ನೆತೆಗೆ ಒಳಗಾಗಿದ್ದರು. ರಾಮದೇವರ ಬೆಟ್ಟಕ್ಕೆ ಮಧ್ಯಾಹ್ನ ಒಬ್ಬರೇ ಬಂದಿರುವ ಅವರು, ಬೆಟ್ಟದ ವೀಕ್ಷಣಾ ಸ್ಥಳದಿಂದ ಜಿಗಿದಿದ್ದಾರೆ. ಅದೃಷ್ಟವಶಾತ್‌ ಗಿಡಮರಗಳ ಮಧ್ಯೆ ಸಿಲುಕಿಕೊಂಡಿದ್ದ ವಿದ್ಯಾರ್ಥಿನಿ ಪ್ರಜ್ಞೆ ತಪ್ಪಿದ್ದರು.

ಇದನ್ನೂ ಓದಿ:ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಜೆಇಇ ವಿದ್ಯಾರ್ಥಿ ಆತ್ಮಹತ್ಯೆ

ಬೆಟ್ಟದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರಿಗೆ ಸಂಜೆ ವಿಷಯ ಗೊತ್ತಾಗಿದ್ದು, ಸ್ಥಳೀಯರ ನೆರವಿನೊಂದಿಗೆ ಅವರನ್ನು ರಕ್ಷಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದರು.

ವಿಡಿಯೋ ನೋಡಿ:ದೇವದಾಸಿ ಪದ್ದತಿ ಹುಟ್ಟಿದ್ದು ಸನಾತನ ಧರ್ಮದಿಂದ – ಬಿ. ಮಾಳಮ್ಮ Janashakthi Media

Donate Janashakthi Media

Leave a Reply

Your email address will not be published. Required fields are marked *