ಬೆಳಗಾವಿ: ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕೊಲೆ ಪ್ರಕರಣದ ಬೆನ್ನಲ್ಲೇ ಮತ್ತೊಂದು ಭೀಕರ ಹತ್ಯೆ ನಡೆದಿದ್ದೂ, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಂತ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಜ್ಯದಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಹಿಲ್ ಗಾರ್ಡ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗೋಕಾಕ್ ಗೊಂದಳಿ ಗಲ್ಲಿ ನಿವಾಸಿ ಪರಶುರಾಮ್(26) ಎಂಬಾತನನ್ನು ಕಾರಿನಲ್ಲಿ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಇದನ್ನೂ ಓದಿ: ಕೃಷಿಹೊಂಡದಲ್ಲಿ ಮುಳಗಿ ಮೂವರು ಬಾಲಕರು ಸಾವು
ಹಳೇ ವೈಷಮ್ಯದ ಹಿನ್ನಲೆಯಲ್ಲಿ ಪರಶುರಾಮ್ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಗೋಕಾಕ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ನೋಡಿ: ಪಿಯುಸಿ ನಂತರ ಪಶುವೈದ್ಯಕೀಯ ಶಿಕ್ಷಣ ಪಡೆಯುವುದು ಹೇಗೆ? Janashakthi Media