ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕರಾಗಿದ್ದ ಸುಮಂಗಳಾ ನಿಧನ

ಬೆಂಗಳೂರು: ವಿಜ್ಞಾನ ಸಂವಹನಕ್ಕಾಗಿ ರಾಷ್ಟ್ರ ಪ್ರಶಸ್ತಿ ವಿಜೇತರಾದ, ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕರಾಗಿದ್ದ ಶ್ರೀಮತಿ ಸುಮಂಗಳಾ ಎಸ್ ಮುಮ್ಮಿಗಟ್ಟಿಯವರು ಇಂದು(ಮಾರ್ಚ್‌ 12) ಮುಂಜಾನೆ ನಿಧನರಾಗಿದ್ದಾರೆ.

ಸುಮಂಗಳಾ ಅವರು ಪತಿ ಮತ್ತು ಪುತ್ರನನ್ನು ಅಗಲಿದ್ದಾರೆ. ಇಂದು ಮಧ್ಯಾಹ್ನ ಚಾಮರಾಜ ಪೇಟೆಯಲ್ಲಿ ಅಂತ್ಯಕ್ರಿಯೆ ನಡೆದಿದೆ.

ಸುಮಾರು 40ಕ್ಕೂ ಹೆಚ್ಚು ವಿಜ್ಞಾನದ ಕೃತಿಗಳು, ಸಾವಿರಾರು ಲೇಖನಗಳು, ನೂರಾರು ವಿಜ್ಞಾನ ಕಾರ್ಯಕ್ರಮಗಳನ್ನು ರೂಪಿಸಿದ್ದ ಇವರಿಗೆ  ಹಲವಾರು ಪ್ರಶಸ್ತಿ ಪುರಸ್ಕಾರಗಳು ದೊರೆತಿವೆ. ಅವುಗಳಲ್ಲಿ ಪರಿಸರ ಪ್ರಶಸ್ತಿ, ರೇಡಿಯೋ ಅಸ್ಕರ್ ಅಂತರಾಷ್ಟ್ರೀಯ ಪ್ರಶಸ್ತಿಯೂ ಪ್ರಮುಖವಾಗಿವೆ.

ಇತ್ತೀಚೆಗೆ ಪ್ರಕಟವಾದ ವಿಜ್ಞಾನ ತಂತ್ರಜ್ಞಾನ ದರ್ಶನ ಅವರ ಪ್ರಮುಖ ಕೃತಿಗಳಲ್ಲಿ ಒಂದಾಗಿದೆ. ಅದ್ಬುತ ಆವಾಸ ಅಂಡಮಾನ್, ಅಲ್ಲಮ ಪ್ರಭು, ಮತ್ತಿತರ ಕೃತಿಗಳು ಅವರ ಬರವಣಿಗೆಯ ವಿಷಯ ವಿಸ್ತಾರಕ್ಕೆ ಉದಾಹರಣೆಯಾಗಿವೆ.

ಹಲವಾರು ವಿಜ್ಞಾನ ಸಂವಹನಕಾರರನ್ನು  ಹುರಿದುಂಬಿಸಿ ವಿಜ್ಞಾನ ಸಂವಹನಕಾರರ ಒಂದು ಪಡೆಯನ್ನು ಕಟ್ಟಿ ಬೆಳಸಿದ  ಕೀರ್ತಿ ಸುಮಂಗಳಾ ಅವರದು.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *