ಬಾಲ್ಯವಿವಾಹ ಪ್ರೋತ್ಸಾಹದ ಆರೋಪದಡಿ ಕೆ.ವೈ.ನಂಜೇಗೌಡ ವಿರುದ್ದ ಎಎಪಿ ದೂರು

ಕೋಲಾರ: ಜೂನ್‌ 30 ಸೋಮವಾರದಂದು ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ಪ್ರಗತಿ ಪರಿಶೀಲನೆ (ಕೆಡಿಪಿ) ಸಭೆಯಲ್ಲಿ ಶಾಸಕ ಕೆ.ವೈ.ನಂಜೇಗೌಡ ಬಾಲ್ಯವಿವಾಹ ಪ್ರೋತ್ಸಾಹಿಸುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಆರೋಪಿಸಿ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖಂಡರು ನಗರದ ಗಲ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದರು.

’18 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಮದುವೆ ಮಾಡಬಾರದೆಂದು ಪ್ರಬಲ ಕಾಯ್ದೆ ಇದೆ. ಆದರೆ, ನಂಜೇಗೌಡರು ಅದನ್ನು ಅಣಕಿಸುವಂತೆ ಕೆಡಿಪಿ ಸಭೆಯಲ್ಲಿ ಮಾತನಾಡಿದ್ದಾರೆ. ಹೀಗಾಗಿ, ಅವರ ವಿರುದ್ಧ ದೂರು ನೀಡಲು ಬಂದಿದ್ದೇವೆ. ಆದರೆ, ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ’ ಎಂದು ಎಎಪಿ ಜಿಲ್ಲಾ ಅಧ್ಯಕ್ಷ ವೆಂಕಟಾಚಲಪತಿ ಆರೋಪಿಸಿದರು.

ಇದನ್ನೂ ಓದಿ: ಯುವ ಸೌರಭ, ಚಿಗುರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

‘ಬಾಲ್ಯವಿವಾಹ ಸಂಬಂಧ ಕ್ರಮ ಕೈಗೊಳ್ಳುತ್ತಿರುವ ಜಿಲ್ಲಾ ಮಹಿಳಾ ರಕ್ಷಣಾ ಘಟಕದ ಅಧಿಕಾರಿಗಳ ವಿರುದ್ಧ ನಂಜೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಾಖಲೆ ಸರಿಯಾಗಿ ಪರಿಶೀಲಿಸದೆ ಜೈಲಿಗೆ ಕಳಿಸುತ್ತಿರುವೆ ಎಂದು ಬೈಯ್ದಿದ್ದಾರೆ. ಈ ಮೂಲಕ ಪರೋಕ್ಷವಾಗಿ ಬಾಲ್ಯವಿವಾಹ ಸಮರ್ಥಿಸುವ ರೀತಿ ಮಾತನಾಡಿದ್ದಾರೆ’ ಎಂದು ದೂರಿದರು.

‘ಕೂಡಲೇ ಪ್ರಕರಣ ದಾಖಲಿಸಿಕೊಂಡು ಕ್ರಮ ವಹಿಸಬೇಕು’ ಎಂದು ಒತ್ತಾಯ ಮಾಡಿದರು.

ಈ ಸಂದರ್ಭದಲ್ಲಿ ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರು ಇದ್ದರು.

ಇದನ್ನೂ ನೋಡಿ: ಒತ್ತಡ ನಿವಾರಿಸಿ, ಹೃದಯದ ಆರೋಗ್ಯ ಹೆಚ್ಚಿಸಿ – ಡಾ ಭಾನು ಪ್ರಕಾಶ್‌ | Janashakthi Media

Donate Janashakthi Media

Leave a Reply

Your email address will not be published. Required fields are marked *