ಗ್ರಾಮೀಣ ಕರ್ನಾಟಕದ ಕುಡಿಯುವ ನೀರು ಸರಬರಾಜಿಗೆ ಆದ್ಯತೆ ಮೇಲೆ ಕ್ರಮ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಕರ್ನಾಟಕ ರಾಜ್ಯ ಈ ವರ್ಷ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು ಕುಡಿಯುವ ನೀರಿನ ಪರಿಸ್ಥಿತಿಯ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಗ್ರಾಮೀಣ ನೀರು ಸರಬರಾಜು ಇಲಾಖೆಯು ಪ್ರತಿನಿತ್ಯ ಸಮಸ್ಯೆಯ ಬಗ್ಗೆ ನಿಗಾ ವಹಿಸುತ್ತಿದ್ದು, ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಆದ್ಯತೆ ಮೇಲೆ ಕ್ರಮ ಕೈಗೊಂಡಿದ್ದು, ಅವಶ್ಯವಿರುವ ಕಡೆ ಕುಡಿಯುವ ನೀರಿನ ಕಾಮಗಾರಿ ನಡೆಸಲು ಕ್ರಮಕೈಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಪ್ರಸ್ತುತ ಬರ ಪರಿಸ್ಥಿತಿಯ ಪರಿಣಾಮ 158 ತಾಲೂಕುಗಳಿಗೆ ಸಂಬಂಧಿಸಿದ 26106 ಗ್ರಾಮಗಳ ಪೈಕಿ 2207 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದ್ದು, ಅದರಲ್ಲಿ 548 ಗ್ರಾಮಗಳಿಗೆ 846 ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಒದಗಿಸಲಾಗುತ್ತಿದೆ ಮತ್ತು 1659 ಗ್ರಾಮಗಳಿಗೆ ನೀರು ಸರಬರಾಜು ಕಲ್ಪಿಸಲು 2098 ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆ ಆಧಾರದ ಮೇಲೆ ಪಡೆಯಲಾಗಿದೆ ಎಂದೂ ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಅಂಜಲಿ ಹತ್ಯೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್‌ ಗಿರೀಶ್‌ ವಿರುದ್ಧ ಮತ್ತೊಂದು ಎಫ್‌ಐಆರ್

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ತಗ್ಗಿಸಲು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣ ನಿಧಿ ಅಡಿಯಲ್ಲಿ ಲಭ್ಯವಿರುವ ಅನುದಾನವನ್ನು ಮೊದಲ ಆದ್ಯತೆಯ ಮೇಲೆ ಬಳಸಿಕೊಳ್ಳಲಾಗುತ್ತದೆ. ಹೆಚ್ಚುವರಿಯಾಗಿ, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಪೂರಕವಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಅನುದಾನವನ್ನು ಬಿಡುಗಡೆ ಮಾಡಲಾಗಿದೆ, ತೊಂದರೆಗೀಡಾದ ಪ್ರದೇಶಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ನೀರು ಸರಬರಾಜು ಮಾಡಲು ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 2024-25ನೆ ಸಾಲಿಗಾಗಿ 20 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

ಜಿಲ್ಲೆಗಳಲ್ಲಿ 480 ಬಹುಗ್ರಾಮ ಯೋಜನೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ಯೋಜನೆಗಳ ಮೂಲಕ 6828 ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಈ ಯೋಜನೆಗಳಲ್ಲಿ ಹೆಚ್ಚಿನವು ನದಿ ಆಧಾರಿತವಾಗಿವೆ ಮತ್ತು ಜಲಾಶಯಗಳ ಮೇಲ್ಭಾಗದಿಂದ ನೀರನ್ನು ತೆಗೆದುಕೊಳ್ಳುವ ಮಟ್ಟಿಗೆ ಸಮರ್ಥನೀಯವಾಗಿವೆ. ಜಲಾಶಯಗಳ ತಗ್ಗುಪ್ರದೇಶಗಳಿಂದ ನೀರನ್ನು ತೆಗೆದುಕೊಳ್ಳುವ ಸಂದರ್ಭಗಳಲ್ಲಿ ಯೋಜನೆಗಳ ಜಲಮೂಲಗಳು ಬತ್ತಿಹೋಗುತ್ತಿರುವುದರಿಂದಲೂ ತೊಂದರೆ ಎದುರಾಗಿದೆ ಎಂದೂ ಸಚಿವರು ಹೇಳಿದ್ದಾರೆ.

ಜಿಲ್ಲೆಗಳಿಂದ ಪಡೆದ ವಿವರಗಳಂತೆ 413 ಗ್ರಾಮಗಳನ್ನು ಒಳಗೊಂಡ 37 ಬಹುಗ್ರಾಮ ಯೋಜನೆಗಳ ಜಲಮೂಲಗಳು ಕಳೆದ 7 ದಿನಗಳಲ್ಲಿ ಒಣಗಿದೆ. ಈ ಗ್ರಾಮಗಳಿಗೆ ಟ್ಯಾಂಕರ್ ಮತ್ತು ಬಾಡಿಗೆ ಬೋರ್‌ವೆಲ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ ಎಂದೂ ಸಚಿವರು ತಿಳಿಸಿದ್ದಾರೆ.

ಇದನ್ನೂ ನೋಡಿ: ಪ್ರಭುದ್ದಳ ಸಾವಿಗೆ ನ್ಯಾಯ ಸಿಗಬೇಕು – ಸಂಘಟನೆಗಳ ಆಕ್ರೋಶJanashakthi Media

Donate Janashakthi Media

Leave a Reply

Your email address will not be published. Required fields are marked *