ಮೊಲಗಳನ್ನು ಭೇಟೆಯಾಡಿದವರ ವಿರುದ್ಧ ಕ್ರಮ: ಈಶ್ವರ ಖಂಡ್ರೆ

ಬೆಂಗಳೂರು: ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಆರ್ಚನಗೌಡ ತುಫಿಹಾಳ ಪುತ್ರ ಹಾಗೂ ಶಾಸಕರ ಸಹೋದರ ಯುಗಾದಿ ಹಬ್ಬದ ನಿಮಿತ್ಯವಾಗಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿ ಮೊಲಗಳನ್ನು ಭೇಟೆಯಾಡಿ ಕಟ್ಟಿಗೆಗೆ ಕಟ್ಟಿ ಮೆರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ, ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ಕುರಿತು ಮಾಹಿತಿ ಬಂದಿದ್ದು ಈ ಒಂದು ಪ್ರಕರಣದಲ್ಲಿ ಯಾರೇ ಇದ್ದರೂ ಕೂಡ ಅವರ ವಿರುದ್ಧ ಸೂಕ್ತವಾದಂತಹ ಕ್ರಮ ಕೈಗೊಳ್ಳಲಾಗುತ್ತದೆ.

ಇದನ್ನೂ ಓದಿ: ಯಾದಗಿರಿ| ಮಾದಿಗ ಸಮುದಾಯದ ಹಿರಿಯರ ಮೇಲೆ ಬೆಂಕಿ ಹಚ್ಚಿದ ಯುವಕ

ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿದವರು ಯಾರೇ ಇದ್ದರೂ ಅವರನ್ನು ರಕ್ಷಣೆ ಮಾಡುವುದಿಲ್ಲ. ಶಾಸಕರ ಪುತ್ರ ಹಾಗೂ ಸಹೋದರನ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ರಾಯಚೂರು ಜಿಲ್ಲೆಯ ಮಸ್ಕಿ ಕಾಂಗ್ರೆಸ್ ಶಾಸಕ ಆರ್ ಬಸವನಗೌಡ ತುರ್ವಿಹಾಳ ಪುತ್ರ ಸತೀಶ್ ಗೌಡ ಮತ್ತು ಸಹೋದರನ ನೇತೃತ್ವದಲ್ಲಿ ಯುಗಾದಿ ಹಬ್ಬದ ನಿಮಿತ್ಯ ಮೊಲಗಳನ್ನು ಬೇಟೆಯಾಡಿ ಮೆರವಣಿಗೆ ಮಾಡಲಾಗಿತ್ತು.

ನೂರಾರು ಜನರ ಜೊತೆಗೆ ಖಡ್ಗ ಮತ್ತು ಕೊಡಲಿ ಪ್ರದರ್ಶನ ಮಾಡುತ್ತಾ ಮೆರವಣಿಗೆ ನಡೆಸಲಾಗಿತ್ತು ಮೊಲಗಳನ್ನು ಬೇಟೆಯಾಡಿ ಮೆರವಣಿಗೆ ಮಾಡುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಇದನ್ನೂ ನೋಡಿ: ಯುಗಾದಿ- ರಂಜಾನ್‌ ಸೌಹಾರ್ದ ಸಂಗಮ – ಕೆ.ಷರೀಫಾ Janashakthi Media

Donate Janashakthi Media

Leave a Reply

Your email address will not be published. Required fields are marked *