ನಟ ಸುದೀಪ್‌ ಜಾಹೀರಾತುಗಳ ಪ್ರದರ್ಶನಕ್ಕೆ ಯಾವುದೇ ನಿರ್ಬಂಧವಿಲ್ಲ: ಇಸಿಐ

ವದೆಹಲಿ: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಪರ ಪ್ರಚಾರ ಮಾಡುತ್ತಿರುವ ಕನ್ನಡ ನಟ ಸುದೀಪ್ ಅವರಿರುವ ಜಾಹೀರಾತುಗಳ ಪ್ರದರ್ಶನಕ್ಕೆ ಯಾವುದೇ ನಿರ್ಬಂಧವಿಲ್ಲ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ತಿಳಿಸಿದೆ.

ಚುನಾವಣೆಗೆ ಸ್ಪರ್ಧಿಸುವ ಅಥವಾ ಸಾರ್ವಜನಿಕ ಹಣದಿಂದ ದೂರದರ್ಶನದಲ್ಲಿ ಪ್ರಚಾರ ಮಾಡುವ ನಟರನ್ನು ಮಾತ್ರ ವಾಣಿಜ್ಯ ಪ್ರದರ್ಶನದಿಂದ ನಿರ್ಬಂಧಿಸಬಹುದು ಎಂದು ಇಸಿಐ ಹೇಳಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡುವುದಾಗಿ ಏಪ್ರಿಲ್ 5ರ ಬುಧವಾರದಂದು ಸುದೀಪ್ ಘೋಷಿಸಿದ್ದಾರೆ. ಚುನಾವಣೆಗಳು ಮುಗಿಯುವವರೆಗೆ ಸುದೀಪ್ ಅವರನ್ನು ಒಳಗೊಂಡ ಚಲನಚಿತ್ರಗಳು, ಕಾರ್ಯಕ್ರಮಗಳು ಮತ್ತು ಜಾಹೀರಾತುಗಳ ಪ್ರದರ್ಶನ ಮತ್ತು ಪ್ರಸಾರವನ್ನು ನಿಷೇಧಿಸುವಂತೆ ಕೋರಿ ಹಲವಾರು ಅರ್ಜಿಗಳು ಸಲ್ಲಿಕೆಯಾದ ನಂತರ ECI ಪ್ರಕಟಣೆ ಹೊರಬಿದ್ದಿದೆ.

 ಇದನ್ನೂ ಓದಿ : ಚುನಾವಣೆ ಮುಗಿಯುವವರೆಗೆ ನಟ ಸುದೀಪ್‌ ಕಾರ್ಯಕ್ರಮ ಪ್ರಸಾರ ಮಾಡದಂತೆ ಆಯೋಗಕ್ಕೆ ಮನವಿ

ಜೆಡಿಎಸ್ ರಾಷ್ಟ್ರೀಯ ವಕ್ತಾರ ತನ್ವೀರ್ ಅಹಮದ್ ಅವರು ನಿರ್ದಿಷ್ಟ ಪಕ್ಷಕ್ಕೆ ಸಂಬಂಧ ಹೊಂದಿರುವ ಯಾವುದೇ ವ್ಯಕ್ತಿಯನ್ನು ದೊಡ್ಡ ಪರದೆಯಲ್ಲಿ ಅಥವಾ ಯಾವುದೇ ದೃಶ್ಯ-ಶ್ರಾವ್ಯ ಮಾಧ್ಯಮದಲ್ಲಿ ತೋರಿಸಬಾರದು ಎಂದು ಮನವಿ ಮಾಡಿದ್ದರು.

ಸುದೀಪ್ ಅಭಿನಯದ ಚಲನಚಿತ್ರ, ಜಾಹೀರಾತು, ಕಿರುತರೆ ಕಾರ್ಯಕ್ರಮವನ್ನು ಪ್ರಸಾರ ಮಾಡಬಾರದು ಎಂದು ಅಖಿಲ ಭಾರತ ವಕೀಲರ ಒಕ್ಕೂಟ (AILU) ರಾಜ್ಯ ನಿಯೋಗದ ಮೂಲಕ ಆಗ್ರಹಿಸಿತ್ತು.

Donate Janashakthi Media

Leave a Reply

Your email address will not be published. Required fields are marked *