ವಿಧಾನಸಭೆ ಚುನಾವಣೆ :‘ಕೌರವ’ನಿಗೆ ನಟಿ ಪ್ರೇಮಾರ ಭವಿಷ್ಯವಾಣಿ

ಬೆಂಗಳೂರು : ವಿಧಾನಸಭೆ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿದೆ. ಈ ನಿಟ್ಟಿನಲ್ಲಿ ಪಕ್ಷಗಳ ನಾಯಕರುಗಳು ಮತಪ್ರಚಾರ ಕೈಗೊಂಡಿದ್ದಾರೆ. ಮತದಾರರನ್ನು ಸೆಳೆಯುವುದಕ್ಕಾಗಿ ಬಾಡೂಟ, ಕುಕ್ಕರ್‌, ಸೀರೆ ಹಂಚುವುದು  ಹೀಗೆ ಹಲವಾರು ನಾನಾ ತಂತ್ರಗಳನ್ನು ರೂಪಿಸುತ್ತಿದ್ದಾರೆ. ನೆನ್ನೆ ದಿನ ನಟ ಸುದೀಪ್‌ ಅವರೂ ಕೂಡ ಪರೋಕ್ಷವಾಗಿ ಬೊಮ್ಮಾಯಿ ಅವರಿಗೆ ಬೆಂಬಲ ಸೂಚಿಸಿದ್ದಾರೆ, ಇದೀಗ ನಟಿ ಪ್ರೇಮ ಅವರೂ ಕೂಡ ಕೃಷಿ ಸಚಿವ, ನಟ ಬಿ.ಸಿ.ಪಾಟೀಲ್‌ ಅವರ ಪರವಾಗಿ ಭವಿಷ್ಯ ನುಡಿದಿದ್ದು, ಬಿ.ಸಿ. ಪಾಟೀಲ್‌ ಅವರು ಒಳ್ಳೆಯ ಕೆಲಸ ಮಾಡಿದ್ದಾರೆ. ಹಾಗಾಗಿ ಮತ್ತೊಮ್ಮೆ ಅವರು ಆಯ್ಕೆಯಾಗುತ್ತಾರೆ ಎಂದಿದ್ದಾರೆ.

ಹಿರೇಕೆರೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿ.ಸಿ. ಪಾಟೀಲ್ ಅವರು ಈ ಬಾರಿಯೂ ಚುನಾವಣೆಯಲ್ಲಿ ಗೆಲ್ಲುತ್ತಾರೆ, ‘ಬಿ.ಸಿ.ಪಾಟೀಲರು ಫೋನ್ ಮಾಡಿದ್ದರು. ನಮ್ಮ ತಂದೆ ನಿಧನರಾಗಿದ್ದಾಗ ಅವರು ಬಂದಿದ್ದರು. ಹೀಗಾಗಿ ಅವರ ಮೇಲಿನ ಗೌರವದಿಂದಾಗಿ ನಾನು ಬಂದಿದ್ದೇನೆ. ನನಗೆ ರಾಜಕೀಯದ ಬಗ್ಗೆ ಗೊತ್ತಿಲ್ಲ. ಅವರು ಕರೆದಿದ್ದರು ಅನ್ನುವ ಒಂದೇ ಒಂದು ಕಾರಣಕ್ಕಾಗಿ ಬಂದಿದ್ದೇನೆ ಅಷ್ಟೇ’ ಎಂದು ಅವರು ಮಾತನಾಡಿದರು.

ಇದನ್ನೂ ಓದಿ : ಪ್ರತ್ಯೇಕ ರಾಜ್ಯ ವಿವಾದ: ʻಸಮಯ ಸಂದರ್ಭ ಬಂದಾಗ ಏನು ಬೇಕಾದರೂ ಆಗಬಹುದುʼ

ಬಿ.ಸಿ ಪಾಟೀಲ್ ರ ಪರವಾಗಿ ಪ್ರಚಾರ ಮಾಡಲು ಬರುತ್ತೀರಾ ಎನ್ನುವ ಪ್ರಶ್ನೆಗೆ, ‘ಪ್ರಚಾರದ ಬಗ್ಗೆ ನನಗೇನೂ ಗೊತ್ತಿಲ್ಲ. ನಾನು ಯಾವಾಗಲೂ ರಾಜಕೀಯದಿಂದ ದೂರ. ಪಾಟೀಲ್ ಅವರ ಜೊತೆ ಒಳ್ಳೆಯ ಬಾಂಧವ್ಯವಿದೆ. ಅದೇ ನನ್ನನ್ನು ಇಲ್ಲಿಗೆ ಕರೆತಂದಿದೆ’  ಎಂದು ಹೇಳಿದರು.

Donate Janashakthi Media

Leave a Reply

Your email address will not be published. Required fields are marked *