ಶಕ್ತಿ ಯೋಜನೆ ಬಗ್ಗೆ ನಟಿ ಶ್ರುತಿ ಟೀಕೆ; ಮಹಿಳಾ ಆಯೋಗದಿಂದ ನೋಟಿಸ್ ಜಾರಿ

ಬೆಂಗಳೂರು: ಶಕ್ತಿ ಯೋಜನೆ ಕುರಿತಾಗಿ ಬಿಜೆಪಿ ನಾಯಕಿ ನಟಿ ಶ್ರುತಿ ಟೀಕೆ ಮಾಡಿದ್ದು,ಈ ವಿಚಾರವಾಗಿ ಸ್ಪಷ್ಟನೆ ನೀಡುವಂತೆ ಮಹಿಳಾ ಆಯೋಗದಿಂದ ನೋಟಿಸ್ ಜಾರಿ ಮಾಡಿದೆ

ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಶಕ್ತಿ ಯೋಜನೆಯಿಂದ ಮಹಿಳೆಯರು, ಮಕ್ಕಳು, ಉಪವಾಸವಿರಬೇಕಾಗುತ್ತದೆ. ಇಂತಹ ಭಾಗ್ಯಗಳನ್ನು ಕೊಟ್ಟು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಶ್ರುತಿ ಹೇಳಿಕೆ ನೀಡಿದ್ದರು. ಗ್ಯಾರಂಟಿ ಯೋಜನೆ ಬಗ್ಗೆ ಟೀಕಿಸಿದ್ದರು.

ಇದನ್ನು ಓದಿ : ಚಿಕ್ಕಬಳ್ಳಾಪುರ ಬಿಜೆಪಿ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಕೆ.ಸುಧಾಕರ್‌ ಆಪ್ತನ ಮನೆಯಲ್ಲಿ ಹಣ: ಪ್ರಕರಣ ದಾಖಲಿಸಿದ ಚುನಾವಣಾ ಆಯೋಗ

ಸಾಮಾಜಿಕ ಕಾರ್ಯಕರ್ತ ಮನೋಹರ್ ಈ ಕುರಿತಾಗಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದು, ದೂರಿನ ಅನ್ವಯ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ನೋಟಿಸ್ ಜಾರಿ ಮಾಡಿದ್ದು, ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚಿಸಿದ್ದಾರೆ.

ಇದನ್ನು ನೋಡಿ : ಕೇಂದ್ರದ ಬಿಜೆಪಿ ಸರ್ಕಾರ ಸ್ತ್ರೀಯರ ಸಬಲೀಕರಣವನ್ನು ಹತ್ತಿಕ್ಕುವ ಕೆಲಸ ಮಾಡಿದೆ – ಹೋರಾಟಗಾರರ ಆರೋಪ

Donate Janashakthi Media

Leave a Reply

Your email address will not be published. Required fields are marked *