ಬಾಲಿವುಡ್ ನಟಿ ತಾಪ್ಸಿ ಪನ್ನು, ನಿರ್ಮಾಪಕ ಅನುರಾಗ್ ಕಶ್ಯಪ್ ಮತ್ತಿತರರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ದೆಹಲಿ: ರೈತರ ಪರವಾಗಿರುವವ ವಿರುದ್ಧ ಬಿಜೆಪಿ ಸರ್ಕಾರ ನಿರಂತರವಾಗಿ ತನಗಿರುವ ಅಸ್ತ್ರಗಳನ್ನು ಬಳಸಿಕೊಂಡು ಅವರ ಮೇಲೆ ದಾಳಿನಡೆಸುತ್ತಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ರೈತ ಹೋರಾಟವನ್ನು ಬೆಂಬಲಿಸಿದ್ದ ಬಾಲಿವುಡ್ ನಟಿ ತಾಪ್ಸಿ ಪನ್ನು, ನಿರ್ಮಾಪಕ ಅನುರಾಗ್ ಕಶ್ಯಪ್ ಮತ್ತಿತರರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಪ್ರತಿಕಾರದ ದ್ವೇಷ ಸಾಧಿಸಲು ಮುಂದಾಗಿರುವ ಮೋದಿ ಸರ್ಕಾರ ದಾಳಿ ಇದೇನು ಹೊಸದಲ್ಲ.  ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ರಾಜ್ಯಧಾನಿ ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ನಿರಂತರ ಹೋರಾಟಕ್ಕೆ ಬೆಂಬಲಿಸಿದ ಪತ್ರಕರ್ತರು, ಸಂಪಾದಕರು, ಪ್ರಗತಿಪರ ಚಿಂತಕರು, ರೈತ ಮುಖಂಡರ ಮೇಲೆ ಎಫ್ ಐ ಆರ್ ಸುರಿಮಳೆ ನಡೆಸಿತ್ತು,  ಈ ರೀತಿ ಸರಕಾರ ನಡೆದುಕೊಳ್ಳುತ್ತಿರುವುದು ಪ್ರಜಾಪ್ರಭುತ್ವ ವಿರೋಧಿಯಾಗಿದೆ.

ಕಳೆದ ತಿಂಗಳಲ್ಲಿ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್, ಪರಿಸರ ಕಾರ್ಯಕರ್ತೆ ದಿಶಾ ರವಿ ಕೂಡ ಸೇರಿದ್ದರು. ಈಗ ಈ ಸಾಲಿಗೆ ಬಾಲಿವುಡ್ ನಟಿ ತಾಪ್ಸಿ ಪನ್ನು, ನಿರ್ಮಾಪಕ ಅನುರಾಗ್ ಕಶ್ಯಪ್ ಸೇರಿದ್ದಾರೆ. ಇವರ ವಿರುದ್ಧ ಮಾತನಾಡಿದವರನ್ನು ಸಹಿಸದ ಮನುವಾದಿಗಳು ಈ ರೀತಿಯ ಐಟಿ ದಾಳಿ ಅಸ್ತ್ರ ಪ್ರಯೋಗಿಸುತ್ತಿದೆ ಎಂದು ಜನಪರ ಸಂಘಟನೆಗಳು ಆರೋಪಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *