ಅಧಿಕಾರಿಗಳ ನಿರ್ಲಕ್ಷ್ಯ: ಬಸ್ ರಿಪೇರಿ ವೇಳೆ ಕೆಎಸ್​ಆರ್​​ಟಿಸಿ ಮೆಕಾನಿಕ್ ಸಾವು

ಬಳ್ಳಾರಿ: ಇಲ್ಲಿನ ಕುರುಗೋಡು ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಮರಣವೊಂದು ಸಂಭವಿಸಿದ್ದು, ಮೆಕಾನಿಕ್ ಟಿ ಮಂಜುನಾಥ್‌ ದಾರುಣವಾಗಿ ಮೃತಪಟ್ಟಿದ್ದಾರೆ. ಇದಕ್ಕೆ ಡಿಪೋ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಬಸ್‌ ಡಿಪೋದಲ್ಲಿ ರಿಪೇರಿ ಮಾಡುವ ಸಮಯದಲ್ಲಿ ದುರ್ಘಟನೆ ಸಂಭವಿಸಿದೆ. ಬಸ್ ಕೆಳಭಾಗದಲ್ಲಿ ತುಂಡಾಗಿದ್ದ ಬುಷ್ ರಾಡ್ ಸರಿಪಡಿಸುವ ವೇಳೆಯಲ್ಲಿ ಅವಘಡ ಸಂಭವಿಸಿದೆ. ರಾಡ್ ತುಂಡಾಗಿ ಕಾರ್ಮಿಕನ ಗಂಟಲಿಗೆ ಸಿಲುಕಿ ಸ್ಥಳದಲ್ಲೇ ಟಿ ಮಂಜುನಾಥ್‌ ಸಾವನ್ನಪ್ಪಿದ್ದಾನೆ.

ಮೃತ ಮಂಜುನಾಥ ಬಾದನಹಟ್ಟಿ ನಿವಾಸಿಯಾಗಿದ್ದು, ಅಧಿಕಾರಿಗಳು ರಿಪೇರಿ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರ‍್ಯಾಂಪ್ ವ್ಯವಸ್ಥೆ ಕಲ್ಪಿಸದೇ ಮೆಕಾನಿಕ್ ಗೆ ರಿಪೇರಿ ಮಾಡಲು ಹೇಳಿದ್ದರಿಂದ ಈ ದುರಂತ ಸಂಭವಿಸಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Donate Janashakthi Media

Leave a Reply

Your email address will not be published. Required fields are marked *