ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ: ಮೊದಲನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು : 6ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪಯಿ, ಶ್ರೀಮತಿ ಇಂದಿರಾಗಾಂಧಿ, ಡಾ ಬಿ.ಆರ್.ಅಂಬೇಡ್ಕರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಸಂಗೊಳ್ಳಿ ರಾಯಣ್ಣ, ಕವಿರನ್ನ , ಗಾಂಧಿತತ್ವ , ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ ಅರ್ಹ ಅಭ್ಯರ್ಥಿಗಳ ಮೆರಿಟ್ ಮತ್ತು ಅಭ್ಯರ್ಥಿಗಳು ದಾಖಲಿಸಿರುವ ಇಚ್ಛೆ / ಆಯ್ಕೆಗಳ ಆಧಾರದ ಮೇಲೆ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ದಿನಾಂಕ 21.04.2025ರಂದು ಪ್ರಾಧಿಕಾರದ ವೆಬ್ಸೈಟಿನಲ್ಲಿ ಪ್ರಕಟಿಸಲಾಗಿದೆ.

ಇದನ್ನೂ ಓದಿ: ಇನ್ನೂ ಒಂದು ವಾರ ಭಾರೀ ಮಳೆ ಸಾಧ್ಯತೆ: ಐಎಂಡಿ

ಸೀಟು ಹಂಚಿಕೆಯ ಫಲಿತಾಂಶವನ್ನು ಪರಿಶೀಲಿಸಿ ಮೂಲ ದಾಖಲೆಗಳನ್ನು ಶಾಲಾ ಹಂತದಲ್ಲಿಯೇ ಪರಿಶೀಲನೆಗೆ ಒಳಪಟ್ಟು ಸರಿ ಇದ್ದಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ದಿನಾಂಕ 29.04.2025 ರ ಸಂಜೆ 5.00 ಗಂಟೆಗೆ ವರೆಗೆ ಸಂಬಂಧಿಸಿದ ಶಾಲೆಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ ಎಂದು ಕೆಇಎ ಪ್ರಕಟಣೆ ಹೊರಡಿಸಿದೆ.

ಇದನ್ನೂ ನೋಡಿ: ವಕ್ಫ್ ಚರ್ಚೆ ತೀವ್ರಗೊಂಡಿದ್ಯಾಕೆ? ಕೆಲವು ಅಂಶಗಳ ಮೇಲೆ ಕ್ರಮ ಕೈಗೊಳ್ಳದಂತೆ ಸುಪ್ರೀಂ ಸರ್ಕಾರವನ್ನು ಏಕೆ ಕೇಳಿದೆ?

Donate Janashakthi Media

Leave a Reply

Your email address will not be published. Required fields are marked *