ಅಹಮದಾಬಾದ್: ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಗುಜರಾತಿನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ಪತನಗೊಂಡಿದೆ. ಬೋಯಿಂಗ್ 787-8 ಡ್ರೀಮ್ಲೈನರ್ ಹೆಸರಿನ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರನ್ನು ಹೊತ್ತೊಯ್ಯುತ್ತಿತ್ತು. ಜನ
ಪತನದ ಪ್ರದೇಶದದಲ್ಲಿ ದಟ್ಟವಾದ ಕಪ್ಪು ಹೊಗೆ ಆವರಿಸಿದ್ದು, ಏಳು ಅಗ್ನಿಶಾಮಕ ವಾಹನಗಳು ಸೇರಿದಂತೆ ತುರ್ತು ಸೇವೆಗಳು ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಸಾವು ನೋವುಗಳ ಬಗ್ಗೆ ಈ ಕ್ಷಣದವರೆಗೂ ಯಾವುದೇ ವರದಿಯಾಗಿಲ್ಲ. ಪ್ರಾಥಮಿಕ ಮಾಹಿತಿ ಪ್ರಕಾರ ವಿಮಾನದಲ್ಲಿ ಗುಜರಾತಿನ ಮಾಜಿ ಸಿಎಂ ವಿಜಯ್ ರೂಪಾನಿ ಇದ್ದರು ಎಂದು ಹೇಳಲಾಗುತ್ತಿದೆ. ಜನ
ಆನ್ಲೈನ್ ಫ್ಲೈಟ್ ಟ್ರ್ಯಾಕರ್ನಲ್ಲಿ ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ನ ಗ್ಯಾಟ್ವಿಕ್ ವಿಮಾನ ನಿಲ್ದಾಣದ ಕಡೆಗೆ ಮಧ್ಯಾಹ್ನ 1.17ಕ್ಕೆ ಟೇಕಾಫ್ ಆಯಿತು. ಇದಾದ 33 ನಿಮಿಷದಲ್ಲಿ ವಿಮಾನ ಪತನಗೊಂಡಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಕಾಲ್ತುಳಿತ ಪ್ರಕರಣ | ಜೂ.13ರಂದು ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ
ವಿಮಾನ ಪತನದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಗುಜರಾತ್ ಮುಖ್ಯಮಂತ್ರಿ, ಗೃಹ ಸಚಿವರು ಮತ್ತು ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿದ್ದಾರೆ. ಕೇಂದ್ರ ಸರ್ಕಾರದ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
ಅಹಮದಾಬಾದ್-ಲಂಡನ್ ಗ್ಯಾಟ್ವಿಕ್ ವಿಮಾನ AI171 ಇಂದು (ಜೂನ್ 12) ಒಂದು ದುರಂತದಲ್ಲಿ ಸಿಲುಕಿದೆ. ಈ ಕ್ಷಣದಲ್ಲಿ, ನಾವು ವಿವರಗಳನ್ನು ಖಚಿತಪಡಿಸಿಕೊಳ್ಳುತ್ತಿದ್ದೇವೆ ಮತ್ತು ಹೆಚ್ಚಿನ ಅಪ್ಡೇಟ್ಗಳನ್ನು ಆದಷ್ಟು ಬೇಗ ಹಂಚಿಕೊಳ್ಳುತ್ತೇವೆ ಎಂದು ಏರ್ ಇಂಡಿಯಾ ವಕ್ತಾರರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಅಹಮದಾಬಾದ್ನಲ್ಲಿ ನಡೆದ ವಿಮಾನ ಅಪಘಾತದ ಬಗ್ಗೆ ತಿಳಿದು ಆಘಾತವಾಯಿತು. ನಾನು ವೈಯಕ್ತಿಕವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇನೆ ಮತ್ತು ಎಲ್ಲಾ ವಾಯುಯಾನ ಮತ್ತು ತುರ್ತು ಪ್ರತಿಕ್ರಿಯೆ ಸಂಸ್ಥೆಗಳಿಗೆ ತ್ವರಿತ ಮತ್ತು ಸಂಘಟಿತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದೇನೆ. ರಕ್ಷಣಾ ತಂಡಗಳನ್ನು ಸಜ್ಜುಗೊಳಿಸಲಾಗಿದೆ ಮತ್ತು ವೈದ್ಯಕೀಯ ನೆರವು ಮತ್ತು ಪರಿಹಾರ ನೆರವನ್ನು ಸ್ಥಳಕ್ಕೆ ತಲುಪಿಸಲಾಗುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು ಟ್ವೀಟ್ ಮಾಡಿದ್ದಾರೆ.
ಇದನ್ನೂ ನೋಡಿ: ಒಂದು ಕುಟುಂಬದ ಮೂರು ತಲೆಮಾರಿನ ಮಹಿಳೆಯರ ಕಥನದ ಸಿನಿಮಾ ʼ ಮಾಲುʼJanashakthi Media