ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತಾರೂಢ ಕಾಂಗ್ರೆಸ್ ಯಾವುದೇ ರೀತಿಯ ರಾಜಕೀಯ ತಂತ್ರಗಳನ್ನು ಅನುಸರಿಸಿಲ್ಲ ಎಂದು ಸ್ಪಷ್ಟಪಡಿಸಿದರು. ವಿಧಾನ
ಮತ ಚಲಾಯಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲಾ ಶಾಸಕರು ಜಾಣ್ಮೆ ಮತ್ತು ಪ್ರಜ್ಞೆಯೊಂದಿಗೆ ನಡೆದುಕೊಂಡಿದ್ದಾರೆ ಎಂದು ಹೇಳಿದರು. “ಯಾರೂ ಒತ್ತಡಕ್ಕೆ ಒಳಗಾಗಿಲ್ಲ. ಪ್ರತಿಯೊಬ್ಬರೂ ತಮ್ಮ ಇಚ್ಛೆಯಂತೆ ಮತ ಚಲಾಯಿಸಿದ್ದಾರೆ. ಹೀಗಾಗಿ ವಿಶೇಷ ತಂತ್ರಗಾರಿಕೆಯ ಅವಶ್ಯಕತೆ ನಮಗೆ ಇರಲಿಲ್ಲ,” ಎಂದು ಅವರು ಹೇಳಿದರು.
ಇದನ್ನೂ ಓದಿ: ಯು.ಎಸ್-ಇರಾನ್ ಒಡಂಬಡಿಕೆ ಪತ್ರ (ಎಂ.ಒ.ಯು)ದ 14 ಅಂಶಗಳು ಇಲ್ಲಿವೆ
ಶಾಸಕರನ್ನು ರೆಸಾರ್ಟ್ನಲ್ಲಿ ಇರಿಸಿದ್ದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, “ನಾವು ಎರಡು ದಿನ ರೆಸಾರ್ಟ್ನಲ್ಲಿ ಇದ್ದದ್ದು ಸತ್ಯ. ಆದರೆ ಅದು ರಾಜಕೀಯ ಆಟಗಳಿಗಾಗಿ ಅಲ್ಲ. ಪರಿಷತ್ ಚುನಾವಣೆಯಲ್ಲಿ ಪ್ರಾಶಸ್ತ್ಯದ ಮತಗಳ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಶಾಸಕರಿಗೆ ಮಾರ್ಗದರ್ಶನ ನೀಡಲು ಮಾತ್ರ ಈ ವ್ಯವಸ್ಥೆ ಮಾಡಲಾಗಿತ್ತು,” ಎಂದು ವಿವರಿಸಿದರು.
ವಿಪಕ್ಷ ಶಾಸಕರಿಂದ ಅಡ್ಡ ಮತದಾನ ನಡೆದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, “ನಮಗೆ ಅಡ್ಡ ಮತದಾನದ ಅಗತ್ಯವೇ ಇರಲಿಲ್ಲ. ಅದೇ ಸಮಯದಲ್ಲಿ ಇದು ಗುಪ್ತ ಮತದಾನವಾಗಿರುವುದರಿಂದ ಯಾರು ಹೇಗೆ ಮತ ಹಾಕಿದ್ದಾರೆ ಎಂಬುದನ್ನು ತಿಳಿಯಲು ಸಾಧ್ಯವಿಲ್ಲ,” ಎಂದು ಹೇಳಿದರು.
ಇನ್ನಷ್ಟು ಮಾತನಾಡಿದ ಅವರು, ಸದನದ ಎಲ್ಲಾ 224 ಶಾಸಕರೂ ತಮ್ಮಗೆ ಸಮಾನವಾಗಿದ್ದು, “ನಾನು ಒಂದು ಪಕ್ಷದ ಮುಖ್ಯಮಂತ್ರಿಯಲ್ಲ, ಎಲ್ಲಾ ಶಾಸಕರಿಗೂ ಮುಖ್ಯಮಂತ್ರಿಯಾಗಿದ್ದೇನೆ,” ಎಂದು ತಿಳಿಸಿದರು.
ಇದನ್ನೂ ನೋಡಿ: ಬೀಜ ಇಲ್ಲ, ಗೊಬ್ಬರ ಇಲ್ಲ, ಬಡವರಿಗೆ ಸೂರು ಇಲ್ಲ | ಸರ್ಕಾರದ ವಿರುದ್ಧ ಸಿಡಿದೆದ್ದ ಅನ್ನದಾತರು Janashakthi Media
