“ಅಮರಾವತಿ” ಆಂದ್ರಪ್ರದೇಶದ ನೂತನ ರಾಜಧಾನಿ

ಅಮರಾವತಿ: “ಅಮರಾವತಿ”ಯನ್ನು ಆಂದ್ರ ಪ್ರದೇಶದ ನೂತನ ರಾಜಧಾನಿಯನ್ನಾಗಿ  ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಘೋಷಿಸಿದ್ದಾರೆ.

ಚಂದ್ರಬಾಬು ನಾಯ್ಡು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಒಂದು ದಿನ ಮುಂಚಿತವಾಗಿ ಈ ಘೋಷಣೆ ಮಾಡಿದ್ದಾರೆ. ಅಮರಾವತಿ ನಮ್ಮ ರಾಜ್ಯದ ರಾಜಧಾನಿಯಾಗಲಿದೆ. ನಾವು ಕೆಲವು ಸ್ಥಳಗಳಲ್ಲದೇ ಇಡೀ ರಾಜ್ಯವನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದ್ದೇವೆ ಎಂದು ನಾಯ್ಡು ಹೇಳಿದರು.

ಇದನ್ನೂ ಓದಿ: ಎನ್‌ಡಿಎ ಸರ್ಕಾರದ‌ ಸಂಪುಟದ ಸಚಿವರು ಇವರು

ಆಂಧ್ರಪ್ರದೇಶದಲ್ಲಿ ಟಿಡಿಪಿ, ಜೆಎಸ್‌ಪಿ ಮತ್ತು ಬಿಜೆಪಿಯನ್ನು ಒಳಗೊಂಡಿರುವ ಎನ್‌ಡಿಎ ಏಕಕಾಲದಲ್ಲಿ ರಾಜ್ಯ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಆಡಳಿತಾರೂಢ ವೈಎಸ್‌ಆರ್‌ಸಿಪಿಯನ್ನು ಸಮಗ್ರವಾಗಿ ಸೋಲಿಸಿದೆ.ವಿಜಯವಾಡದಲ್ಲಿ ನಡೆದ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೈತ್ರಿಕೂಟದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜನಸೇನಾ ಪಕ್ಷದ ಮುಖ್ಯಸ್ಥ ಕೆ ಪವನ್ ಕಲ್ಯಾಣ್ ಅವರ ಹೆಸರನ್ನು ಪ್ರಸ್ತಾಪಿಸಿದರು ಮತ್ತು ಇದನ್ನು ಬಿಜೆಪಿ ರಾಜ್ಯಾಧ್ಯಕ್ಷೆ ಮತ್ತು ಹೊಸದಾಗಿ ಚುನಾಯಿತ ಸಂಸದೆ ಡಿ ಪುರಂದೇಶ್ವರಿ ಬೆಂಬಲಿಸಿದ್ದಾರೆ.

ವಿಶಾಖಪಟ್ಟಣವನ್ನು ಆಡಳಿತ ರಾಜಧಾನಿಯನ್ನಾಗಿ ಅಭಿವೃದ್ಧಿಪಡಿಸಿ ಅಲ್ಲಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಹೇಳಿದ್ದ ನಿರ್ಗಮಿತ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರನ್ನು ತರಾಟೆಗೆ ತೆಗೆದುಕೊಂಡ ನಾಯ್ಡು, ವಿಶಾಖಪಟ್ಟಣದಲ್ಲಿ ವೈಎಸ್‌ಆರ್‌ಸಿಪಿಯನ್ನು ಸೋಲಿಸುವ ಮೂಲಕ ಜನರು ಈ ಆಲೋಚನೆಯನ್ನು ನಿರಾಕರಿಸಿದ್ದಾರೆ ಎಂದರು.

ಇದನ್ನೂ ನೋಡಿ: ಚುನಾವಣಾ ಆಯೋಗ ಕಟ್ಟುನಿಟ್ಟಾಗಿ ನಡೆದುಕೊಂಡಿದ್ದರೆ ಬಿಜೆಪಿ ಹೀನಾಯವಾಗಿ ಸೋಲುತ್ತಿತ್ತು -ಡಾ.ಕೆ.ಪ್ರಕಾಶ್ ಜೊತೆ ಮಾತುಕತೆ

Donate Janashakthi Media

Leave a Reply

Your email address will not be published. Required fields are marked *