9 ನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ ನೌಕರರ ಪ್ರತಿಭಟನೆ

ಶಿಕ್ಷಕಿಯರ ಸ್ಥಾನಮಾನಕ್ಕೆ ಆಗ್ರಹಿಸಿ, ಹಾಗೂ ಗ್ರಾಚ್ಯುಟಿ ನೀಡುವಂತೆ ಒತ್ತಾಯಿಸಿ ಅಂಗನವಾಡಿ ನೌಕರರು ನಡೆಸುತ್ತಿರುವ ಹೋರಾಟ 9 ನೇ ದಿನಕ್ಕೆ ಕಾಲಿಟ್ಟಿದೆ. ಸಿಐಟಿಯು ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ 35 ಸಾವಿರಕ್ಕೂ ಹೆಚ್ಚು ಅಂಗನವಾಡಿ ನೌಕರರು ಭಾಗವಹಿಸಿದ್ದಾರೆ. ಬೇಡಿಕೆ ಈಡೇರುವವರೆಗೂ ಈ ಜಾಗದಿಂದ ಹೋಗುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ.

ಮೈ ಕೊರೆಯುವ ಚಳಿಯಲ್ಲಿ ರಸ್ತೆಯಲ್ಲೇ ಹಗಲು ರಾತ್ರಿಯೆನ್ನದೆ ಹೋರಾಟ ಮಾಡುತ್ತಿದ್ದಾರೆ. ನಿನ್ನೆ ಪ್ರತಿಭಟನಾ ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳಾಭಿವೃದ್ಧಿ ಇಲಾಖೆಯ ಸಚಿವ ಹಾಲಪ್ಪ ಆಚಾರ್‌ ಭೇಟಿ ನೀಡಿ ಪ್ರತಿಭಟನೆಯನ್ನು ವಾಪಸ್ಸ ಪಡೆಯುವಂತೆ ಮನವಿ ಮಾಡಿದರು. ಲಿಖಿತ ಆದೇಶ ಬರುವವರೆಗೂ  ನಾವು ಇಲ್ಲಿಂದ ತೆರಳುವುದಿಲ್ಲ ಎಂದು ಪ್ರತಿಭಟನೆಕಾರರು ಎಚ್ಚರಿಸಿದ್ದಾರೆ.

ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿರುವ ಅಂಗನವಾಡಿ ನೌಕರರು ನಿತ್ಯ ರಾತ್ರಿ ಅವರೆ ಅಡುಗೆಯನ್ನು ತಯಾರಿಸಿಕೊಂಡು ಊಟ ಮಾಡುತ್ತಿರುವುದು ವಿಶೇಷವಾಗಿ ಕಂಡುಬಂತು. ಇನ್ನೂ ನಾಳೆಗೆ ಸರಕಾರಕ್ಕೆ ನೀಡಿರುವ ಡೆಡ್‌ಲೈನ್‌ ಮುಗಿಯುತ್ತಿದ್ದು, ಸರಕಾರ ಬೇಡಿಕೆಗಳಿಗೆ ಸ್ಪಂದಿಸದೇ ಹೋದಲ್ಲಿ ಮುಖಮಂತ್ರಿ ಮನೆಗೆ ಮುತ್ತಿಗೆ ಹಾಕುವುದಾಗಿ ಸಂಘಟಿಕರು ಎಚ್ಚರಿಕೆ ನೀಡಿದ್ದಾರೆ.

ನಿತ್ಯ ಮಕ್ಕಳನ್ನು ಪಾಲನೆ ಮಾಡಿ, ಅವರನ್ನು ಭಾರತದ ಸತ್ಪ್ರಜೆಯನ್ನಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ  ಅಂಗನವಾಡಿ ನೌಕರರ ಬೇಡಿಕೆಯನ್ನು ಸರಕಾರ ಈಡೇರಿಸಲು ಮುಂದಾಗಬೇಕಿದೆ.

ಇಂದಿನ ಪ್ರತಿಭಟನೆಯಲ್ಲಿ ಚಿತ್ರನಟ ಚೇತನ್‌, ಲೇಖಕಿ ಡಾ. ದು ಸರಸ್ವತಿ, ಕೇರಳದ ಮಾಜಿ ಶಿಕ್ಷಣ ಸಚಿವ ಎಂ ಎ ಬೇಬಿ, ಜೆ ಡಿಎಸ್ ನ ಮಾಜಿ ಶಾಸಕ ಸುಧಾಕರ ಲಾಲ್, ಸಿಪಿಐಎಂ ಪೊಲಿಟ್ ಬ್ಯೂರೋ ಸದಸ್ಯರಾದ ಬಿವಿ ರಾಘವುಲು, ರಾಜ್ಯ ಕಾರ್ಯದರ್ಶಿ ಯು ಬಸವರಾಜ್, ಕೆ.ನೀಲಾ  ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಕಾರ್ಯದರ್ಶಿ ದೇವಿ ಮಂಡ್ಯ ಸಿಐಟಿಯು ರಾಜ್ಯ ಕಾರ್ಯದರ್ಶಿ ಮಂಜುನಾಥ ಆನೇಕಲ್ ಹೋರಾಟಕ್ಕೆ ಬೆಂಬಲಿಸಿ ಮಾತಾಡಿದರು.

ರೈತ ನಾಯಕ ಎಚ್‌ ಆರ್‌ ನವೀನ್‌ ಕುಮಾರ್‌ ಕ್ಯಾಮರ ಕಣ್ಣಲ್ಲಿ ಅಂಗನವಾಡಿ ನೌಕರರ ಹೋರಾಟದ ದೃಶ್ಯಗಳು ಕಂಡಿದ್ದು ಹೀಗೆ….

 

 

 

 

Donate Janashakthi Media

Leave a Reply

Your email address will not be published. Required fields are marked *