ಅಂಗನವಾಡಿ ಕಾರ್ಯಕರ್ತೆಯ ಕತ್ತು ಸೀಳಿ ಬರ್ಬರ ಹತ್ಯೆ

ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಹಾಲ್ಕುರಿಕೆ ಗ್ರಾಮದಲ್ಲಿ ಅಂಗನವಾಡಿ ಸಹಾಯಕಿಯೊಬ್ಬರನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಗೈದಿರುವ ಘಟನೆ ಭಾನುವಾರ ನಡೆದಿದೆ.

ಅಂಗನವಾಡಿ ಸಹಾಯಕಿ ಆಗಿ ಕೆಲಸ ನಿರ್ವಹಿಸುತ್ತಿದ್ದ ಭಾರತಿ (30) ಹತ್ಯೆಗೀಡಾದ ಮಹಿಳೆ. ಮಹಿಳೆ ಪತಿಯನ್ನು ಕಳೆದುಕೊಂಡಿದ್ದು,ಆಕೆಯ ಪತಿ ನಾಗರಾಜ್ ಅವರ ಅಕ್ಕನ ಮಗನಾದ ದಿವಾಕರ್ (25) ಎಂಬುವವನು ಅಂಗನವಾಡಿ ಕಟ್ಟಡದ ಹಿಂಭಾಗ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಅಂಗನವಾಡಿ ಕಟ್ಟಡದ ಹಿಂಭಾಗದಲ್ಲಿ ವಾಸವಿರುವ ಮನೆಯ ಓರ್ವ ಮಹಿಳೆ ಘಟನೆಯನ್ನು ನೋಡಿದ್ದಾರೆ ಎನ್ನಲಾಗಿದೆ.

ಕೆಲ ಸಾರ್ವಜನಿಕರು ಈ ಘಟನೆಯ ಬಗ್ಗೆ ತಿಳಿದು, ಆಕೆಯನ್ನು ಕಾಪಾಡಲೆಂದು ಹೋದಾಗ ನಿಮ್ಮನ್ನೂ ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿ, ಆರೋಪಿ ಓಡಿ ಹೋಗಿದ್ದಾನೆ ಎಂದು ತಿಳಿದು ಬಂದಿದೆ.

ಈ ಘಟನೆ ನಡೆದ ಸ್ಥಳಕ್ಕೆ ಹೊನ್ನವಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಿಐಟಿಯು ಖಂಡನೆ : ಈ ಘಟನೆಯನ್ನು ಸಿಐಟಿಯು ತುಮಕೀರು ಜಿಲ್ಲಾ ಸಮಿತಿಯು ಉಗ್ರವಾಗಿ ಖಂಡಿಸಿದೆ. ಎಂತಹದ್ದೆ ಸಮಸ್ಯೆ ಇದ್ದರು ಜೀವದ ಬಲಿ ಪಡೆಯುವುದು ಸ್ವೀಕಾರಾರ್ಹವಲ್ಲ. ಕೊಲೆಗಡುಕರನ್ನು ಈ ಕೂಡಲೇ ಬಂಧಿಸಿ ಉಗ್ರ ಶಿಕ್ಷೆಗೆ ಒಳಪಡಿಸಬೇಕು ಎಂದು ಸಿಐಟಿಯು ಜಿಲ್ಲಾ ಸಮಿತಿ ಒತ್ತಾಯಿಸಿದೆ.

Donate Janashakthi Media

Leave a Reply

Your email address will not be published. Required fields are marked *