ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಕೇಸ್ ದಾಖಲು

ಉಡುಪಿ: ಉದ್ಯಮಿಗೆ ಬೈಂದೂರು ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಬಂಧನವಾಗಿರುವ  ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ವೃತ್ತಿಯಲ್ಲಿ ಮೀನುಗಾರನಾಗಿರುವ ಬ್ರಹ್ಮಾವರ ನಿವಾಸಿ ಸುದೀನ ಎಂಬುವರು ಬಟ್ಟೆ ಅಂಗಡಿ ಹಾಕಿಸಿಕೊಡುತ್ತೇನೆ ಎಂದು ಚೈತ್ರಾ ಕುಂದಾಪುರ ಐದು ಲಕ್ಷ ರೂಪಾಯಿ ವಂಚಿಸಿದ್ದಾರೆ ಅಂತ ಸುದೀನ ಆರೋಪಿಸಿದ್ದಾರೆ. ಚೈತ್ರಾ ಕುಂದಾಪುರ ವಿರುದ್ಧ ಬ್ರಹ್ಮಾವರ ತಾಲ್ಲೂಕಿನ ಕೋಟ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಇದು ಕಾಶ್ಮೀರಿ ಜನರ ಸಮಸ್ಯೆಯಷ್ಟೇ ಅಲ್ಲ,ಇಡೀ ದೇಶದ ಸಮಸ್ಯೆ : ತಾರಿಗಾಮಿ

2015ರಲ್ಲಿ ಪರಿಚಯವಾದ ಚೈತ್ರಾ ಬಿಜೆಪಿಯಲ್ಲಿ ಉನ್ನತ ಸ್ಥಾನದಲ್ಲಿರುವ ಹಲವು ಸಚಿವರು, ಶಾಸಕರು ನಿಕಟ ಸಂಪರ್ಕದಲ್ಲಿದ್ದಾರೆ ಎಂದು ನಂಬಿಸಿದ್ದಾರೆ. ಉಡುಪಿ ಹಾಗೂ ಕೋಟದಲಿ ಬಟ್ಟೆ ಅಂಗಡಿಗಳನ್ನು ಹಾಕಲು ನೆರವು ನೀಡುತ್ತೇನೆ ಎಂದು 2018ರಿಂದ 2022 ರವಗೆರೆ ಹಂತ ಹಂತವಾಗಿ 5 ಲಕ್ಷ ಪಡೆದಿದ್ದಾರೆ. ಆ ಬಳಿಕ ಈಕೆಯ ನಡೆಯಿಂದ ಅನುಮಾನಗೊಂಡ ಸುದೀನ, ಕೂಡಲೇ ಬಟ್ಟೆ ಅಂಗಡಿ ಹಾಕಿಸಿಕೊಡಿ ಅಂತ ಒತ್ತಾಯಿಸಿದಾಗ. ಕೂಡಲೇ ಬೆದರಿಕೆ ಹಾಕಿದ್ರಂತೆ. ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುತ್ತೇನೆ, ಬಾಡಿಗೆ ಗೂಂಡಾಗಳಿಂದ ಕೊಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದಾರೆ.

ವಿಡಿಯೋ ನೋಡಿ: ಒಂದು ದೇಶ ಒಂದು ಚುನಾವಣೆ ಸಾಧ್ಯವೇ? – ಡಾ. ಕೆ.ಪ್ರಕಾಶ್ ಹೇಳುವುದೇನು? Janashakthi Media

Donate Janashakthi Media

Leave a Reply

Your email address will not be published. Required fields are marked *